ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

21 ಸಬ್ ರಿಜಿಸ್ಟ್ರಾರ್ ಕಚೇರಿಗಳ‌ ಮೇಲೆ ಲೋಕಾಯುಕ್ತ ಪೊಲೀಸರಿಂದ ದಾಳಿ.. 8 ಮಂದಿ ಮಧ್ಯವರ್ತಿಗಳು ವಶಕ್ಕೆ

ಬೆಂಗಳೂರು ಸೇರಿದಂತೆ 21 ಸಬ್​ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು,​​ ವರ್ತೂರು ಉಪನೋಂದಣಿ ಕಚೇರಿಯಲ್ಲಿ 3.45 ಲಕ್ಷ ರೂ ನಗದು ಪತ್ತೆಯಾಗಿದೆ. ಈ ಸಂಬಂಧ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 8 ಮಂದಿ ಮಧ್ಯವರ್ತಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಕುರಿತಂತೆ ಸಾರ್ವಜನಿಕರಿಂದ‌ ದೂರು ಬಂದ ಹಿನ್ನೆಲೆ ಬೆಂಗಳೂರು ಸೇರಿದಂತೆ 21 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ‌ ಪರಿಶೀಲನೆ ನಡೆಸಿದ್ದಾರೆ.

ಮಿತಿ ಮೀರಿದ ಭ್ರಷ್ಟಾಚಾರ, ಮಧ್ಯವರ್ತಿಗಳ ಹಾವಳಿ ಸೇರಿದಂತೆ ವಿವಿಧ ಸಮಸ್ಯೆಗಳ‌ ಬಗ್ಗೆ ಸಾರ್ವಜನಿಕರಿಂದ‌ ದೂರು ಬಂದ ಹಿನ್ನೆಲೆ ಸುಮಾರು 150 ಮಂದಿ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ‌ ವಿವಿಧೆಡೆ ದಾಳಿ ನಡೆಸಿದ್ದಾರೆ. ಬನ್ನೇರುಘಟ್ಟ, ಯಲಹಂಕ, ಮಹದೇಪುರ, ವರ್ತೂರು, ದೊಮ್ಮಲೂರು, ಬೊಮ್ಮನಹಳ್ಳಿ, ಬೇಗೂರು, ಜೆಪಿನಗರ, ಬನಶಂಕರಿ, ಬಸವನಗುಡಿ, ಕೆಂಗೇರಿ ನಾಗವಾರ, ಬೆಂಗಳೂರು ಗ್ರಾಮಾಂತರ ಸಬ್ ರಿಜಿಸ್ಟರ್‌ ಕಚೇರಿ, ರಾಮನಗರ, ಕನಕಪುರ ಸೇರಿದಂತೆ 21 ಕಡೆಗಳಲ್ಲಿ ಉಪ ನೋಂದಣಿ ಕಚೇರಿಗಳಲ್ಲಿ ಅಧಿಕಾರಿಗಳು ದಾಳಿ ‌ಮಾಡಿ ಪರಿಶೀಲನೆ ನಡೆಸಿದ್ದಾರೆ.

ವರ್ತೂರು ಉಪನೋಂದಣಿ ಕಚೇರಿಯಲ್ಲಿ 3.45 ಲಕ್ಷ ರೂ ನಗದು ಪತ್ತೆ

ಇನ್ನು, ವರ್ತೂರು ಉಪನೋಂದಣಿ ಕಚೇರಿಯಲ್ಲಿ 3.45 ಲಕ್ಷ ನಗದು ಪತ್ತೆಯಾಗಿದ್ದು, ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 8 ಮಂದಿ ಮಧ್ಯವರ್ತಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ಸೇರಿದಂತೆ 21 ಸಬ್​ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು,​​ ವರ್ತೂರು ಉಪನೋಂದಣಿ ಕಚೇರಿಯಲ್ಲಿ 3.45 ಲಕ್ಷ ರೂ ನಗದು ಪತ್ತೆಯಾಗಿದೆ. ಈ ಸಂಬಂಧ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 8 ಮಂದಿ ಮಧ್ಯವರ್ತಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಕುರಿತಂತೆ ಸಾರ್ವಜನಿಕರಿಂದ‌ ದೂರು ಬಂದ ಹಿನ್ನೆಲೆ ಬೆಂಗಳೂರು ಸೇರಿದಂತೆ 21 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ‌ ಪರಿಶೀಲನೆ ನಡೆಸಿದ್ದಾರೆ.

ಮಿತಿ ಮೀರಿದ ಭ್ರಷ್ಟಾಚಾರ, ಮಧ್ಯವರ್ತಿಗಳ ಹಾವಳಿ ಸೇರಿದಂತೆ ವಿವಿಧ ಸಮಸ್ಯೆಗಳ‌ ಬಗ್ಗೆ ಸಾರ್ವಜನಿಕರಿಂದ‌ ದೂರು ಬಂದ ಹಿನ್ನೆಲೆ ಸುಮಾರು 150 ಮಂದಿ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ‌ ವಿವಿಧೆಡೆ ದಾಳಿ ನಡೆಸಿದ್ದಾರೆ. ಬನ್ನೇರುಘಟ್ಟ, ಯಲಹಂಕ, ಮಹದೇಪುರ, ವರ್ತೂರು, ದೊಮ್ಮಲೂರು, ಬೊಮ್ಮನಹಳ್ಳಿ, ಬೇಗೂರು, ಜೆಪಿನಗರ, ಬನಶಂಕರಿ, ಬಸವನಗುಡಿ, ಕೆಂಗೇರಿ ನಾಗವಾರ, ಬೆಂಗಳೂರು ಗ್ರಾಮಾಂತರ ಸಬ್ ರಿಜಿಸ್ಟರ್‌ ಕಚೇರಿ, ರಾಮನಗರ, ಕನಕಪುರ ಸೇರಿದಂತೆ 21 ಕಡೆಗಳಲ್ಲಿ ಉಪ ನೋಂದಣಿ ಕಚೇರಿಗಳಲ್ಲಿ ಅಧಿಕಾರಿಗಳು ದಾಳಿ ‌ಮಾಡಿ ಪರಿಶೀಲನೆ ನಡೆಸಿದ್ದಾರೆ.

ವರ್ತೂರು ಉಪನೋಂದಣಿ ಕಚೇರಿಯಲ್ಲಿ 3.45 ಲಕ್ಷ ರೂ ನಗದು ಪತ್ತೆ

ಇನ್ನು ವರ್ತೂರು ಉಪನೋಂದಣಿ ಕಚೇರಿಯಲ್ಲಿ 3.45 ಲಕ್ಷ ನಗದು ಪತ್ತೆಯಾಗಿದ್ದು, ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 8 ಮಂದಿ ಮಧ್ಯವರ್ತಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ