ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ನಿಂದ ಜೆಡಿಎಸ್ ಸೇರ್ಪಡೆ

ಚಾಮರಾಜನಗರ ಜಿಲ್ಲೆ ಹನೂರು:ಕಾಂಗ್ರೆಸ್ ಪಕ್ಷದಲ್ಲಿ ಶಾಸಕ ಆರ್ ನರೇಂದ್ರ ಅವರು ನಿಷ್ಠಾವಂತ ಕಾರ್ಯಕರ್ತನನ್ನು ಕಡೆ ಗಣಿಸಿರುವುದರಿಂದ ನಾವು ಕಾಂಗ್ರೆಸ್ ಪಕ್ಷವನ್ನು ಬಿಡಬೇಕಾಗಿದೆ ಎಂದು ಜೆಡಿಎಸ್ ಸೇರ್ಪಡೆ ಮುಖಂಡ ಹಲಗಾಪುರ ಗುರುನಂಜಪ್ಪ ತಿಳಿಸಿದರು
ಹನೂರು ಪಟ್ಟಣದ ಆರ್ ಎಂ ಸಿ ಸಮೀಪದಲ್ಲಿ ಜೆಡಿಎಸ್ ಪಕ್ಷಕ್ಕೆ ಜಿಲ್ಲಾಧ್ಯಕ್ಷ ಎಂ,ಆರ್ ಮಂಜುನಾಥ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಶಾಲು ಧರಿಸುವ ಮೂಲಕ ಸೇರ್ಪಡೆಯಾಗಿ ಮಾತನಾಡಿದ ಅವರು ದಿವಂಗತ ರಾಜೂ ಗೌಡರ ಕಾಲದಿಂದಲೂ ಸಹ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದೇನೆ ಆದರೆ ಶಾಸಕ ಆರ್ ನರೇಂದ್ರ ಅವರು ಅಂದಿನಿಂದ ಇಲ್ಲಿಯವರೆಗೂ ಸಹ ಕಾರ್ಯಕರ್ತರನ್ನು ಕಡೆಗಣಿಸುತ್ತಾ ಬಂದಿದ್ದಾರೆ ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ.
ಕಳೆದ 5ವರ್ಷಗಳಿಂದಲೂ ಸಹ ಹನೂರು ಕ್ಷೇತ್ರದಲ್ಲಿ ತಮ್ಮ ಸೇವೆ ಮಾಡುತ್ತಿದ್ದಾರೆ, ಮುಂದಿನ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸುವಂತೆ ಕಾರ್ಯಕರ್ತರು ಒಗ್ಗಟ್ಟಾಗುತ್ತೇವೆ ಎಂದು ತಿಳಿಸಿದರು.
ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ,ಆರ್ ಮಂಜುನಾಥ್ ಮಾತನಾಡಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸ ವಿಷಯ ಅಧಿಕಾರ ಮುಖ್ಯವಲ್ಲ ಜನರ ಸೇವೆ ಮುಖ್ಯ ಮುಂದಿನ ದಿನಗಳಲ್ಲೂ ಸಹ ನಿಮ್ಮ ಕಷ್ಟ ದುಃಖಗಳಿಗೆ ಬೆನ್ನಲುಬಾಗಿ ನಿಂತು ಸೇವೆ ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳಾದ ಶಿವಮೂರ್ತಿ,ಜಾಸ್ಸಿಮ್, ಉದ್ದನೂರು ಗಿರೀಶ್,ಚಿನ್ನ ವೆಂಕಟ,ಜಗನಾಥ್, ಲಿಂಗರಾಜು,ಮುರುಗೇಶ್ , ಹಾಗೂ ಇನ್ನಿತರರು ಇದ್ದರು, ವರದಿ-ಉಸ್ಮಾನ್ ಖಾನ್ ಬಂಡಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ