ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಲಿಗಾಗಿ ಬಾಯ್ತೆರೆದು ಕಾಯುತ್ತಿದೆ ರಸ್ತೆಗುಂಡಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕು ಕರಾವಳಿ ಭಾಗದ ಜಿಲ್ಲೆಗಳಿಗೆ ತೆರಳುವವರಿಗೆ ಹೆಬ್ಬಾಗಿಲು ಇದ್ದಂತೆ ಆದರೆ ಹುಬ್ಬಳ್ಳಿ ಮಾರ್ಗವಾಗಿ ಬರುವ ದ್ವಿಚಕ್ರವಾಹನ/ಕಾರು/ಲಾರಿ ಸವಾರರಿಗೆ ಬಾಚನಕಿ ಗ್ರಾಮದ ಸೇತುವೆ ಬಳಿ ಬಿದ್ದಿರುವ ರಸ್ತೆಗುಂಡಿಗಳು ವಿಶೇಷವಾಗಿ ಮುಂಡಗೋಡ ದೈವಜ್ಞ ಕಲ್ಯಾಣ ಮಂಟಪದ ಎದುರಿಗಿರುವ ಈ ರಸ್ತೆ ಗುಂಡಿಯಂತೂ ಬಲಿಗಾಗಿ ಬಾಯ್ತೆರೆದು ಕುಳಿತಂತಿದೆ ಪ್ರತಿನಿತ್ಯ ಸಾವಿರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ ಹಾಗೆಯೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೂಡಾ ಸಮೀಪದಲ್ಲಿ ಇರುವುದರಿಂದ ಈ ಮಾರ್ಗವಾಗಿ ಸಾಗುವ ವಿಧ್ಯಾರ್ಥಿಗಳ ಪಾಲಿಗಂತೂ ಈ ರಸ್ತೆ ಗುಂಡಿ ಮಾರಕವಾಗಿದೆ, ಕೆಲ ದಿನಗಳ ಹಿಂದೆ ಹಿರಿಯ ನಾಗರಿಕರೊಬ್ಬರು ರಸ್ತೆಗುಂಡಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ವಿಪರೀತ ಗಾಯ ಮಾಡಿಕೊಂಡಿದ್ದರು. ಜನಪ್ರತಿನಿಧಿಗಳು, ಅಧಿಕಾರಿಗಳು ಪ್ರತಿನಿತ್ಯ ಸಂಚರಿಸುವ ಈ ಮಾರ್ಗದಲ್ಲಿ ಜ್ವಲಂತ ಸಮಸ್ಯೆಯಾಗಿ ಪರಿಣಮಿಸಿರುವ ಈ ರಸ್ತೆ ಗುಂಡಿಗಳಿಂದ ಗಂಭೀರ ಅಫಘಾತಗಳು ಆಗುವ ಮುಂಚೆಯೇ ಪರಿಹಾರ ನೀಡುತ್ತಾರೋ ಇಲ್ಲವೋ? ಅನ್ನೋದನ್ನ ಕಾದು ನೋಡಬೇಕಿದೆ.
ವರದಿ: ಶಿವರಾಜ್ ಶಿರಾಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ