ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಾಂಧಿನಗರ ಕೊಳಚೆ ಪ್ರದೇಶದ ಬಗ್ಗೆ ಗೊಂದಲ-ಜಿಲ್ಲಾಧಿಕಾರಿಗಳಿಗೆ ಮನವಿ

ಉತ್ತರ ಕನ್ನಡ:ಗಾಂಧಿನಗರವನ್ನು ಕರ್ನಾಟಕ ಸರ್ಕಾರದ ಕೊಳಗೇರಿ ಅಭಿವೃದ್ಧಿ ಮಂಡಳಿ ಅಡಿಯಲ್ಲಿ ಸ್ಲಂ ಏರಿಯಾ (ಕೊಳಚೆ ಪ್ರದೇಶ) ಎಂದು ಘೋಷಿಸಿದ್ದಕ್ಕೆ
ಮುಂಡಗೋಡ ತಾಲೂಕು ಮುಂಡಗೋಡ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಗಾಂಧಿನಗರ ಸರ್ವೇ ನಂಬರ್ – 186 ರ ವ್ಯಾಪ್ತಿಯಲ್ಲಿ 530 ಕುಟುಂಬಗಳ ಪೈಕಿ 253 ಕುಟುಂಬಗಳು ಆಕ್ರೋಶ ವ್ಯಕ್ತಪಡಿಸಿ, ದಿನಾಂಕ 09/11/2022 ಬುಧವಾರ ಉತ್ತರಕನ್ನಡ ಜಿಲ್ಲಾಧಿಕಾರಿಯಾದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿಯಾಗಿ ಗಾಂಧಿನಗರ ಪ್ರದೇಶವು ಸರ್ವೇ ನಂಬರ್ 186 ಅಡಿಯಲ್ಲಿ ಬರುತ್ತಿದ್ದು ಈಗಾಗಲೇ ರಸ್ತೆ, ಚರಂಡಿ,ಕುಡಿಯುವ ನೀರು,ಬೀದಿ ದೀಪ ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದಿದ್ದು ಅಭಿವೃದ್ಧಿ ಹೆಸರಿನಲ್ಲಿ ಅಕ್ರಮಗಳು ನಡೆಯುತ್ತಿದ್ದು, ಗಾಂಧಿನಗರವನ್ನು ಕೊಳಚೆ ಪ್ರದೇಶ ಎಂದು ಘೋಷಿಸುವ ಬಗ್ಗೆ ಈ ಭಾಗದ ಜನರಿಗೆ ಯಾವುದೇ ಪೂರ್ವಾಪರ ಮಾಹಿತಿಯೇ ಇಲ್ಲವಾಗಿತ್ತು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಈ ನಡೆ ಅನುಮಾನ ತರುವಂತಾಗಿದ್ದು ಮಾನ್ಯ ಜಿಲ್ಲಾಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ, ಸಾರ್ವಜನಿಕರ ಸಮ್ಮುಖದಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡಿ ಗಾಂಧಿನಗರವನ್ನೂ ಕೊಳಚೆ ಪ್ರದೇಶ ಎಂದು ಘೋಷಣೆ ಮಾಡುವ ಅವಶ್ಯಕತೆ ಇದೆಯೇ ಎಂಬುದನ್ನು ಖುದ್ದು ಪರಿಶೀಲನೆ ನಡೆಸಬೇಕೆಂದು ಗಾಂಧಿನಗರದ ನಿವಾಸಿಗಳು ಜಿಲ್ಲಾಧಿಕಾರಿಗಳ ಬಳಿ ಒತ್ತಾಯಿಸಿದ್ದಾರೆ.

ಈ ವೇಳೆ ವೆಂಕಟೇಶ್ ಶಿರಾಲಿ,ಎನ್ ಡಿ ಕಿತ್ತೂರ, ಆರ್ ಸಿ ಮಳೇಕರ,ಪಿಡಿ ನಾಯಕ್,ಕೆ ಬಿ ಕಲಾಲ,ಮಾರುತಿ ಕುರುಬ ಮುಂತಾದವರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ