ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಂಗೋತ್ರಿ ಕಾಲೇಜಿನಲ್ಲಿ ಸಂಜೀವಿನಿ ಸಮಾಜ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಇಂದು ಸಂಜೀವಿನಿ ಟ್ಯಾಲೆಂಟ್ ಸರ್ಚ್ ಪರೀಕ್ಷೆ

ವಿಜಯನಗರ ಜಿಲ್ಲೆ ಕೊಟ್ಟೂರು ;
ಪಟ್ಟಣದ ಗಂಗೋತ್ರಿ ಕಾಲೇಜಿನಲ್ಲಿ ಸಂಜೀವಿನಿ ಸಮಾಜ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಇಂದು ಸಂಜೀವಿನಿ ಟ್ಯಾಲೆಂಟ್ ಸರ್ಚ್ ಪರೀಕ್ಷೆಯನ್ನು ಕೊಟ್ಟೂರು ತಾಲೂಕಿನ 15 ಪ್ರೌಢಶಾಲೆಗಳ ಗ್ರಾಮೀಣ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಗೆ ಒಟ್ಟು 334 ವಿದ್ಯಾರ್ಥಿಗಳು ನೊಂದಣಿಯನ್ನು ಮಾಡಿಕೊಂಡಿದ್ದರು ಅದರಲ್ಲಿ 309 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ ಎಂದು ಪರೀಕ್ಷೆಯ ಆಂತರಿಕ ಮೇಲ್ವಿಚಾರಕರಾದ ಶ್ರೀ ಮರುಳಪ್ಪ ಕೆ ಗೌರವಾಧ್ಯಕ್ಷರು ಇವರು ಪತ್ರಿಕ ಪ್ರಕಟಣೆಯನ್ನು ತಿಳಿಸಿದ್ದಾರೆ ಹಾಗೂ ಪರೀಕ್ಷೆಯ ಪರೀಕ್ಷಕರಾಗಿ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಶ್ರೀ ಆನಂದ್ , ನಿಂಗಪ್ಪ ಮತ್ತು ಭಾಗೀರಥಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ನಿರ್ಮಲ ಶಿವನ ಗುತ್ತಿ , ಉಪನ್ಯಾಸಕರಾದ ಶ್ಯಾಮ್ ರಾಜ್ ಟಿ.ಇವರು ಪರಿವೀಕ್ಷಣೆ ಮಾಡಿದರು.ಗಂಗೋತ್ರಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ರಜತ್ ಸಿ. ಬಿ. ಹಾಗೂ ನಿರ್ದೇಶಕರಾದ ಶ್ರೀಮತಿ ರಚನಾ ರಜತ್ ಇವರು ಯಾವಾಗಲೂ ಸಂಜೀವಿನಿ ಸಂಸ್ಥೆಗೆ ನೆರವು ಹಾಗೂ ಸಹಕಾರ ನೀಡುತ್ತಿದ್ದಾರೆ. ಮುಂದಿನ ಒಂದು ವಾರದ ಒಳಗೆ ಮೌಲ್ಯಮಾಪನ ಕಾರ್ಯ ಮುಗಿಸಿ ಫಲಿತಾಂಶವನ್ನು 15 ಶಾಲೆಗೆ ಕಳುಹಿಸಿಕೊಡಲಾಗುವುದು ಪ್ರತಿ ಶಾಲೆಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ಕೊಟ್ಟೂರು ತಾಲೂಕಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರಿಗೆ ಕಾರ್ಯಕ್ರಮವನ್ನು ಆಯೋಜಿಸಿ ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುವುದು ಎಂದು ಸಂಜೀವಿನಿ ಸಮಾಜ ಅಭಿವೃದ್ಧಿ ಸಂಸ್ಥೆಯ ಸಂಯೋಜಕ ಶಶಿಕಿರಣ ಕೆ ಇವರು ತಿಳಿಸಿದರು.ಪರೀಕ್ಷೆಯ ಕೊಠಡಿ ಮೇಲ್ವಿಚಾರಕರಾಗಿ ಶಿವಕುಮಾರ್ ಎ.ಎಂ, ಗುರುಬಸವರಾಜ ಎ.ಎಂ.ಎಂ, ಕೊಟ್ರೇಶ ಪಿ ಕೆ.ಎಂ ಪೂರ್ಣಚಂದ್ರ, ಸಂಸ್ಥೆಯ ಅಧ್ಯಕ್ಷ ಸಿದ್ದಲಿಂಗಪ್ಪ ಡಿ. ನಾರಾಯಣ ಹೆಚ್. ವಿನಯಕುಮಾರ,ವೇದಾವತಿ ಅನುಷಾ ಸುಪ್ರಿಯಾ ಇತರರು ಕಾರ್ಯನಿರ್ವಹಿಸಿದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ