ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುದಗಲ್ ಕೋಟೆ ಉತ್ಸವ ಪ್ರಾರಂಭಿಸಲು ಪ್ರಾಮಾಣಿಕ ಪ್ರಯತ್ನ ಮಾನಪ್ಪ ವಜ್ಜಲ್ ಅಭಿಮತ

ಮುದಗಲ್ ; ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ, ಎನ್ನುವ ಹಾಗೆ ಈ ದಿನ ವಿಜಯ ನಗರ ಸಾಮ್ರಾಜ್ಯದ ಗತವೈಭವ ಸಾರುವ, ಕೋಟೆಯ ನಾಡು, ಮುದ್ದಿನ ಕಲ್ಲುಗಳ ತವರೂರು, ಐತಿಹಾಸಿಕ ನಗರ ಮುದಗಲ್ಲಿನಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮವನ್ನು ಚಿನ್ನದ ನಾಡಿನ ಹೆಮ್ಮೆಯ ಸುಪುತ್ರ,ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಾನಪ್ಪ ಡಿ.ವಜ್ಜಲರು ತಮ್ಮ ಅಮೃತ ಹಸ್ತದಿಂದ ಸಸಿಗೆ ನೀರೆರೆದು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹಾಗೂ ತಾಯಿ ಭುವನೇಶ್ವರಿ ದೇವಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು ನಂತರ ಮಾತನಾಡಿದ ಮಹನೀಯರು ಕನ್ನಡ ನಾಡಿಗೆ ಸುಮಾರು *2 ಸಾವಿರ ವರ್ಷಗಳ ಇತಿಹಾಸವಿದೆ.ಈ ಪವಿತ್ರ ಭೂಮಿಯ ನೆಲ, ಜಲ, ಭಾಷೆ,ಗಡಿಗಳಿಗೆ ಧಕ್ಕೆ ಬಾರದಂತೆ ಈ ನೆಲದ ರಕ್ಷಣೆಗೆ ನಾವೆಲ್ಲರೂ ಕಂಕಣ ಬದ್ಧರಾಗೋಣ,ಮುದುಗಲ್ ನಗರವು ಒಂದು ಐತಿಹಾಸಿಕ ಮಹತ್ವವಿದೆ.ನಮ್ಮ ನಿಮ್ಮೆಲ್ಲರ ಬಹು ದಿನಗಳ ಬೇಡಿಕೆಯಾದ ಮುದಗಲ್ ಕೋಟೆ ಉತ್ಸವವನ್ನು ಮುಂದಿನ ದಿನಮಾನಗಳಲ್ಲಿ ಖಂಡಿತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು ಈ ಸಂದರ್ಭದಲ್ಲಿ *ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಶ್ರೀ ರಾಜಶೇಖರ ಪಾಟೀಲ ಅಳ್ಳುಂಡಿ, ತಾಲೂಕು ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಪಾಟೀಲ್, ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ