ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕ್ಕಳ ದಿನಾಚರಣೆ

ಹನೂರು:ಮಕ್ಕಳ ದಿನಾಚರಣೆ ಅಂಗವಾಗಿ ಹನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮುಜಮಿಲ್ ಪಾಷಾ ಅವರು ಕ್ಷೇತ್ರ ವ್ಯಾಪ್ತಿಯ ಸಿದ್ದಯ್ಯನಪುರ ಸವೆಂತ್ -ಡೇ ಅಡ್ವೆಂಟಿಸ್ಟ್ ವಾಕ್ ಮತ್ತು ಶ್ರವಣ ನ್ಯೂನತೆಯ ವಿದ್ಯಾರ್ಥಿಗಳ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಮುಜಾಮಿಲ್ ಪಾಷ ಅವರು ಕುಟುಂಬದವರೊಡನೆ ವಿಶೇಷ ಚೇತನ ಶಾಲೆಗೆ ಭೇಟಿ ನೀಡಿ ಮಕ್ಕಳ ದಿನಾಚರಣೆ ಅಂಗವಾಗಿ ಹೋಗುಚ್ಚ ನೀಡಿ ಶುಭಾಶಯ ಕೋರಿ ಸಿಹಿ ಹಂಚಿದರು.

ಬಳಿಕ ವಿದ್ಯಾರ್ಥಿಗಳಿಗೆ ಬಿರಿಯಾನಿ, ಕಬಾಬ್ ಭೋಜನವನ್ನು ಏರ್ಪಡಿಸಿ ಸ್ವತಹ ತಾವೇ ಊಟವನ್ನು ಬಡಿಸಿದರು.

ಈ ವೇಳೆ ಮಾತನಾಡಿದ ಮುಜಾಮಿಲ್ ಪಾಷ ಅವರು, ಈ ಒಂದು ಕಾರ್ಯಕ್ರಮವನ್ನು ನಾನು ರಾಜಕೀಯ ಲಾಭಕ್ಕಾಗಿ ಮಾಡುತ್ತಿಲ್ಲ. ಕೋವಿಡ್ ಗೂ ಮುನ್ನ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಬಂದಿದ್ದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಈ ಮಕ್ಕಳೊಡನೆ ಮಕ್ಕಳ ದಿನಾಚರಣೆ ಆಚರಿಸುತ್ತಿರುವುದು ಸಂತಸವನ್ನು ತಂದಿದೆ. ಸಾಮಾನ್ಯ ಮಕ್ಕಳಂತೆ ಈ ವಿಶೇಷ ಚೇತನರನ್ನು ಕೂಡ ಸಮಾಜದ ಮುಖ್ಯ ವಾಹಿನಿಗೆ ತರುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ಪಾಜಿಲ್ ಪಾಷಾ, ಕಾಮಿಲ್ ಪಾಷಾ, ವಾಸಿಂ ಸೇರಿದಂತೆ ಸವೆಂತ್ -ಡೇ ಅಡ್ವೆಂಟಿಸ್ಟ್ ವಾಕ್ ಮತ್ತು ಶ್ರವಣ ನ್ಯೂನತೆಯ ವಿದ್ಯಾರ್ಥಿಗಳ ವಸತಿ ಶಾಲೆಯ ಮಕ್ಕಳು, ಬೋಧಕ ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ