ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕರ ಕುಂದು ಕೊರತೆ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಡಿ ಎಸ್ ರಮೇಶ್

ಸಾರ್ವಜನಿಕರ ಕುಂದು ಕೊರತೆ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಡಿ ಎಸ್ ರಮೇಶ್ ಹನೂರು: ಪಟ್ಟಣದ ಲೋಕೋಪಯೋಗಿ ವಸತಿಗೃಹ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಿ ಎಸ್ ರಮೇಶ್ ರವರು ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯಾದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಸಿಫ್ ರಸ್ತೆ ಅಭಿವೃದ್ಧಿ ಸಂಬಂಧಪಟ್ಟ ಕಾಮಗೆರೆ ಮುಖ್ಯರಸ್ತೆಯಲ್ಲಿನ ಕೆಲವು ಬಾಡಿಗೆದಾರರಿಗೆ ಮಾತ್ರ ಪರಿಹಾರ ನೀಡಿದ್ದಾರೆ. 56 ಜನಗಳ ಪೈಕಿ 20 ಜನರಿಗೆ ಪರಿಹಾರ ನೀಡುವ ಕ್ರಮದಿಂದ ಹೆಸರನ್ನು ಕೈ ಬಿಡಲಾಗಿದೆ ಎಂದು ದೂರಿದರು. ತಕ್ಷಣ ಉಪ ವಿಭಾಗ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದಾರೆ.
ರಾಮನಗುಡ್ಡ ದ ಪ್ರದೇಶದಲ್ಲಿ ಬೋರ್ ವೆಲ್ ನ ಮೂಲಕ ಪಟ್ಟಣಕ್ಕೆ ಬರುವ ನೀರಿನ ಪೈಪ್ ಲೈನ್ ಹೊಡೆದ ಪರಿಣಾಮ 13ನೇ ವಾರ್ಡ್ ಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸಣ್ಣಪುಟ್ಟ ದುರಸ್ತಿ ಕಾರ್ಯವನ್ನು ಮಾಡಲು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ನಿಗದಿತ ಅವಧಿಗೆ ಪಂಚಾಯಿತಿ ಮೀಟಿಂಗ್ ಗೆ ಕರೆಯುತ್ತಿಲ್ಲ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್ ದೂರಿದರು. ಈ ವೇಳೆ ಜಿಲ್ಲಾಧಿಕಾರಿಗಳು ಕೂಡಲೇ ಪೈಪ್ ಲೈನ್ ದುರಸ್ತಿ ಮೀಟಿಂಗ್ ಕರೆವಂತೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ನೀಡಲಾಗಿರುವ ಪರಿಹಾರವನ್ನು ಫಲಾನುಭವಿಗಳಿಗೆ ನೀಡಲಾಗಿಲ್ಲ, ಎಂದು ಪಟ್ಟಣ ಪಂಚಾಯಿತಿ ಸದಸ್ಯ ಸಂಪತ್ ಕುಮಾರ್ ಸಂತ್ರಸ್ತರಾದ ಅನಿತಾ, ಸೋಮಶೇಖರ್ ಎಂಬುವರ ಪರವಾಗಿ ಮನವಿ ಮಾಡಿದರು. ಈ ಬಗ್ಗೆ ತಹಸಿಲ್ದಾರರಲ್ಲಿ ಮನವಿ ಕೇಳಿದಾಗ 48 ಜನರಿಗೆ 1 ಲಕ್ಷ ಕೋವಿಡ್ ಪರಿಹಾರ ನೀಡಬೇಕಾಗಿದೆ ಎಂದು ತಿಳಿಸಿದರು. ಸರ್ಕಾರದಿಂದ ಹಣ ಬಂದ ಬಳಿಕ ಪರಿಹಾರವನ್ನು ನೀಡಲಾಗುವುದು ಎಂದು ವಿವರಿಸಿದರು.
ಮುಖ್ಯ ಶಿಕ್ಷಕಿ ರತ್ನಮ್ಮ ಎಂಬುವರು ಕಳೆದ 20 ವರ್ಷಗಳಿಂದ ಪಟ್ಟಣದ ಆರ್ ಎಸ್ ದೊಡ್ಡಿ ಗ್ರಾಮದಲ್ಲಿ ಕ್ರಯಕ್ಕೆ ನಿವೇಶನ ಪಡೆದು ಅಂದಿನಿಂದ ಇಂದಿನವರೆಗೂ ಕಂದಾಯ ಪಾವತಿಸಿ ಈ ಸ್ವತ್ತು ಪಡೆದಿದ್ದೇನೆ. ಆದರೆ ಪಟ್ಟಣ ಪಂಚಾಯತಿಯವರು ಸಿದ್ದರಾಜು ಎಂಬುವರಿಗೆ ಅದೇ ಅಧಿವೇಶನಕ್ಕೆ ಈ ಸ್ವತ್ತು ನೀಡಿದ್ದಾರೆ ಎಂದು ಹಳಲು ತೋಡಿಕೊಂಡರು. ಇದಕ್ಕೆ ಜಿಲ್ಲಾಧಿಕಾರಿಗಳು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಿಗೆ ಕೂಡಲೇ ದಾಖಲೆಯನ್ನು ಪರಿಶೀಲಿಸಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಅವರಿಗೆ ನ್ಯಾಯವನ್ನು ಒದಗಿಸಬೇಕೆಂದು ಸೂಚಿಸಿದರು.
ಈ ಕಾರ್ಯಕ್ರಮದಲ್ಲಿ ಇತ್ತಾಸಿಲ್ದಾರ್ ಆನಂದಯ್ಯ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮೂರ್ತಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಚೇತನ್, ಭೂಮಾಪಕ ಕುಮಾರಸ್ವಾಮಿ, ತಾಲೂಕು ಪಂಚಾಯಿತಿ ಎ ಡಿ ರವೀಂದ್ರ, ಸಿರಸ್ತುದಾರ್ ನಾಗೇಂದ್ರ, ಕಂದಾಯ ನಿರೀಕ್ಷಕರಗಳಾದ ಶಿವಕುಮಾರ್ ಮಹದೇವಸ್ವಾಮಿ ಮಾದೇಶ್, ಗ್ರಾಮ ಲೆಕ್ಕಿಗ ಶೇಷಣ್ಣ, ವಿನೋದ್, ರಾಜು, ಇನ್ನು ಮುಂತಾದ ಅಧಿಕಾರಿ ವರ್ಗದವರು ಹಾಜರಿದ್ದರು
ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ