ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬುಡಕಟ್ಟು ಸಮುದಾಯದ ನಾಯಕ ಭಗವಾನ್ ಬಿರ್ಸಾ ಮುಂಡಾ ಜಯಂತಿ ಆಚರಣೆ


ಹನೂರು:ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಯುವ ಕ್ರಿಯಾಶೀಲಾತ್ಮಕ ಸಮಾಜ ಸೇವಕ ಮುಖಂಡರಾದ ನಿಶಾಂತ್ ಶಿವಮೂರ್ತಿಯವರು ಭಗವಾನ್ ಬಿರ್ಸಾ ಮುಂಡಾ ಜಯಂತಿಯನ್ನು ಆಚರಣೆ ಮಾಡಿದ್ದರು.ಬಿರ್ಸಾ ಮುಂಡಾ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜೀರಿಗೆಗದ್ದೆ ಮಾದಮ್ಮ ರವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಿದರು.
ಭಗವಾನ್ ಬಿರ್ಸಾಮುಂಡಾ ಜಯಂತಿ ಅಂಗವಾಗಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸೋಲಿಗ ಸಮುದಾಯದ ಜನರು ಪಟ್ಟಣದ ಮಲೆ ಮಹದೇಶ್ವರ ಬೆಟ್ಟದ ಹೆದ್ದಾರಿಯಿಂದ ಖಾಸಗಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ಮಾಡಿದರು.
ಬಳಿಕ ಮಾತನಾಡಿದ ನಿಶಾಂತ್ ರವರು ಬುಡಕಟ್ಟು ಸಮುದಾಯದ ನಾಯಕರಾದ ಬಿರ್ಸಾ ಮುಂಡಾ ಅಂದಿನ ಬಂಗಾಳ ಹಾಗೂ ಇಂದಿನ ಜಾರ್ಖಂಡ್ ನಲ್ಲಿ ಬ್ರಿಟಿಷರ ವಿರುದ್ಧ ದಂಗೆಯೇಳುವ ಮೂಲಕ ಬುಡಕಟ್ಟು ಸಮುದಾಯದಲ್ಲಿ ಪ್ರಖ್ಯಾತಿಯನ್ನು ಪಡೆದಿದ್ದರು.ನಂತರ ಸಾಕಷ್ಟು ಹೋರಾಟಗಳಲ್ಲಿ ಇವರು ಹೆಸರುವಾಸಿಯಾಗಿದ್ದಾರೆ.ಇದರಿಂದ ಬಿಸ್ರಾ ಮುಂಡಾ ರವರ ಜನಪ್ರಿಯತೆ ಹೆಚ್ಚಾಗುತ್ತಿದ್ದಾಗ,ಇದನ್ನು ಅರಿತ ಬ್ರಿಟಿಷರು ಬಿರ್ಸಾ ಮುಂಡಾರನ್ನು ಬಂಧಿಸಿ 2ವರ್ಷಗಳ ಕಾಲ ಸೆರೆಮನೆ ವಾಸವನ್ನು ನೀಡಿದ್ದರು.ಬಿರ್ಸಾ ಮುಂಡಾ ರವರು ತಮ್ಮ ಸಮುದಾಯಕ್ಕೆ ಸ್ಥಾನಮಾನ ಕಲ್ಪಿಸಬೇಕು ಎಂದು ತಮ್ಮ ಜೀವನವನ್ನೇ ಮುಡುಪಾಗಿಟ್ಟರು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸೋಲಿಗ ಮುಖಂಡರಾದ ರಂಗೇಗೌಡ,ಸೀಗೆ ಹೊಸೂರು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಬುಲೆಟ್ ಬಸವರಾಜು,ಬೈಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸದಾನಂದ ಮೂರ್ತಿ,ಮುಖಂಡರುಗಳಾದ ರವೀಂದ್ರ,ಕಣ್ಣಪ್ಪ,ಕಿರಣ್,ಚೇತನ್,ಬಾಬು,ಪಾಳ್ಯ ಸಿದ್ದಪ್ಪಾಜಿ,ತೇಜು ಇನ್ನೂ ಮುಂತಾದ ಮುಖಂಡರುಗಳು ಹಾಜರಿದ್ದರು. ವರದಿ ಉಸ್ಮಾನ್ ಖಾನ್ ಬಂಡಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ