ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಲಿಧಾಮ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ರೈತಸಂಘಗಳು

ಹನೂರು :ಕಾಡಂಚಿನ ಗ್ರಾಮಗಳ ಜನರಿಗೆ ಕನಿಷ್ಟ ಮೂಲಭೂತ ಸೌಲಭ್ಯಗಳನ್ನು ನೀಡದೆ ಸರ್ಕಾರ ಹುಲಿಸಂರಕ್ಷಿತ ಅರಣ್ಯ ಪ್ರದೇಶ ಮಾಡಲು ಹೊರಟಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಕೋಳ್ಳೆಗಾಲ ತಾಲ್ಲೂಕು ಅಧ್ಯಕ್ಷರಾದ ಗೌಡೆಗೌಡ ತಿಳಿಸಿದರು.
ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೋಸೆಫ್ ಹೂಗಾರ್ ಒಬ್ಬ ಪಟ್ಟಣವಾಸಿ ಅಲ್ಲದೆ ವ್ಯಾಪಾರಸ್ಥರಾಗಿದ್ದು ಅಂತಹವರು ಹಳ್ಳಿಯ ಕಡೆ ಬಂದು ಜೀವನ ನಡೆಸಲಿ ಆಗ ಮಾತ್ರ ಹುಲಿಧಾಮ ಮಾಡಿಸಲು ನಿರ್ಧಾರ ಮಾಡಲಿ ಕೇವಲ ಬೆಂಗಳೂರಿನಂತಹ ಸಿಟಿಯಲ್ಲಿ ಕುಳಿತು ಜೀವನ ನಡೆಸಿ ಎಲ್ಲೊ ಕುಳಿತು ಹೋರಾಟ ಮಾಡುವ ಬದಲು ಮೊದಲು ಕಾಡಂಚಿನ ಜನರ ವಾಸ್ತವ ಸ್ಥಿತಿಯನ್ನು ಅರಿಯಲಿ ನಂತರ ಸರ್ಕಾರಕ್ಕೆ ಸಲಹೆ ನೀಡಲಿ ಎಂದು ತಿಳಿಸಿದರು.ಜಿಲ್ಲಾಧ್ಯಕ್ಷರಾದ ಹೆಬ್ಸುರು ಬಸವಣ್ಣ ಮಾತನಾಡಿದ ಅವರು ಹನೂರು ತಾಲ್ಲೂಕು ಕೇಂದ್ರವಾಗಿ ನಾಲ್ಕು ವರ್ಷಕಳೆದರು ಇನ್ನು ಯಾವುದೇ ಸರ್ಕಾರಿ ಕಛೇರಿಗಳ ಸ್ಥಳಾಂತರ ಮಾಡಿಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಬಹಳಷ್ಟು ರೈತರು ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಅಕೆಯುವಂತಾಗಿದೆ ಇದನ್ನು ಕೂಡಲೇ ಇಂತಹ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಲಿ ಪಟ್ಟಣ ನಿವಾಸಿಗಳಾದ ಜೋಸೆಫ್ ರು ಒಬ್ಬ ವ್ಯಾಪಾರಸ್ಥರಾಗಿದ್ದು ಅವರ ಮಾತಿಗೆ ಹೆಚ್ಚು ಮನ್ನಣೆಯನ್ನು ನೀಡದಿರಲಿ ಎಂದು ತಿಳಿಸಿದರು
ಇದೇ ಸಂದರ್ಭದಲ್ಲಿ
ಗೌರವ ಅಧ್ಯಕ್ಷರಾದ ಶಿವರಾಮು,ಅಮ್ಜದ್ ಖಾನ್ ,ರವಿನಾಯ್ಡ್ ,ರಾಜಣ್ಣ,ಶಕ್ತಿವೇಲ್,ವೆಂಕಟೇಶ್ , ಕಾಂಚಳ್ಳಿ ಬಸವಾರಾಜು ಹಾಗೂ ಇನ್ನಿತರರು ಹಾಜರಿದ್ದರು.
ವರದಿ-ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ