ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲೂಕು ದಂಡಾಧಿಕಾರಿ ತಪ್ಪು ಮಾಡಿದ್ದಾರೆ ಅವರನ್ನು ಸೇವೆಯಿಂದ ಅಮಾನತು ಮಾಡಿ

ಯಾದಗಿರಿ ಶಹಾಪುರ ತಾಲೂಕಿನ ದಂಡಾಧಿಕಾರಿಯವರು ನಾಯಕೋಡಿ ಹೆಸರಿನಲ್ಲಿ ಹಿಂದುಳಿದ ವರ್ಗದ ಜಾತಿಯ ತಳವಾರ ಜಾತಿಯವರಿಗೆ ಎಸ್ ಟಿ (ಪರಿಶಿಷ್ಟ ಪಂಗಡ) ಪ್ರಮಾಣ ಪತ್ರ ನೀಡಿ ತಾಲೂಕು ದಂಡಾಧಿಕಾರಿ ತಪ್ಪು ಮಾಡಿದ್ದಾರೆ ಅವರನ್ನು ಸೇವೆಯಿಂದ ಅಮಾನತು ಮಾಡಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಗ್ರೇಡ್ ೨ ದಂಡಾಧಿಕಾರಿ ಸೇತು ಮಾಧವ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.
ದಂಡಾಧಿಕಾರಿ ಕಚೇರಿಯ ತಾಲೂಕಿನ ಭೀಮರಾಯನ ಗುಡಿಯ ಮಂಜುನಾಥ ಬೇನಾಳ ಆರ್.ಡಿ 0039012435982 ಮತ್ತು ಕವಿತಾ ನಾಯಕೋಡಿ,ಆರ್.ಡಿ 0039012435989 ಇಬ್ಬರಿಗೆ ಹಿಂದುಳಿದ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ.ಇವರು ನಾಯಕೋಡಿ ಆಗಿದ್ದರೂ ಸಹ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ಕೊಟ್ಟಿರುವುದು ತಪ್ಪು ಈ ಜಾತಿ ಪ್ರಮಾಣ ಪತ್ರವನ್ನು ಕೂಡಲೇ ರದ್ದು ಪಡಿಸಬೇಕು ಎಂದು ವಾಲ್ಮೀಕಿ ಸಮುದಾಯ ಮುಖಂಡರು ಒತ್ತಾಯಿಸಿದ್ದರು.
ಪ್ರವರ್ಗ- ೧ ರಲ್ಲಿ ಬರುವ ಅಂಬಿಗ ತಳವಾರ ಪರಿಶಿಷ್ಟ ಜಾತಿ (ಎಸ್ ಟಿ) ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಅರ್ಜಿ ಸಲ್ಲಿಸುವ ಸಮಯದಲ್ಲಿ ನಕಲಿ ದಾಖಲೆಗಳು ಸೃಷ್ಟಿಸಿರುವುದು ಕಂಡು ಬಂದಿರುವುದು.ಈ ಬಗ್ಗೆ ಮುಂದಿನ ದಿನಗಳಲ್ಲಿ ಉನ್ನತಮಟ್ಟದ ತನಿಖಾ ತಂಡ ರಚಿಸಬೇಕು ಎಂದು ಆಗ್ರಹಿಸಿದರು.ನಿಜವಾದ ಪರಿಶಿಷ್ಟ ಜಾತಿಯವರಿಗೆ ಅನ್ಯಾಯವಾಗುತ್ತಿದೆ.ಸರ್ಕಾರಕ್ಕೆ ವಂಚನೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.ಒಂದು ವೇಳೆ ನಿರ್ಲಕ್ಷ್ಯವಹಿಸಿದರೆ ಮುಂದಿನ ದಿನಗಳಲ್ಲಿ ದಂಡಾಧಿಕಾರಿಗಳ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು ಈ ವೇಳೆ ವಾಲ್ಮೀಕಿ ಸಮಾಜದ ಮುಖಂಡರಾದ ಆರ್.ಚೆನ್ನಬಸಯ್ಯ ವನದುರ್ಗ,ನಾಗಪ್ಪ,ಕಾಶಿರಾಜ, ಗೌಡಪ್ಪಗೌಡ ಆಲ್ದಾಳ,ಶೇಖರ್ ದೊರೆ, ಮಲ್ಲಿಕಾರ್ಜುನ ಶಿರವಾಳ,ಭೀಮಣ್ಣ ಬೂದನೂರ, ಬಸಲಿಂಗಪ್ಪ ಹವಾಲ್ದಾರ್,ಅಂಭ್ರೇಶ ವಕೀಲರು, ಶರಣಪ್ಪ ವಕೀಲರು,ಬಸಪ್ಪ ಭಂಗಿ,ರಾಘವೇಂದ್ರ ಯಕ್ಷಿಂತಿ,ರಮೇಶ್ ಗಾಂಜಿ,ನಾಗರಾಜ ಹಳಿಸಗರ, ಮಾಹದೇವ ಶಾರದಹಳ್ಳಿ,ಯಂಕಣ್ಣ ಚೆನ್ನೂರ, ಮಲ್ಲಪ್ಪ ದೊಡಮನಿ,ಮಾದೇವಪ್ಪ,ಸಾಬಣ್ಣ ಶಿರವಾಳ,ಬಸಪ್ಪ ವೆಂಕಟಗಿರಿ,ವೆಂಕಟೇಶ್ ಪರಸಾಪುರ ಅನೇಕರು ಭಾಗವಹಿಸಿದ್ದರು.
ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ