ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂಡಗೋಡ ಪಟ್ಟಣ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ

ಬಾರ್ ಹಾಗೂ ಅನುಮತಿ ಪಡೆದ ರೆಸ್ಟೋರೆಂಟ್ ಗಳಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಆದರೆ ಮುಂಡಗೋಡ ತಾಲೂಕಿನಲ್ಲಿನ ಚಿತ್ರಣವೇ ಬೇರೆ
ಜನನಿಬಿಡ ಪ್ರದೇಶಗಳಲ್ಲಿ ಬಹಿರಂಗವಾಗಿಯೇ ಮದ್ಯ ಮಾರಾಟ ಮಾಡಲಾಗುತ್ತಿದೆ ಇದನ್ನು ಪ್ರಶ್ನೆ ಮಾಡಿ ತಡೆಯಬೇಕಾದ ಸಂಬಂಧ ಪಟ್ಟ ಇಲಾಖೆ ಯವರಂತೂ ಜಾಣ ನಿದ್ರೆಗೆ ಜಾರಿರುವುದು ವಿಪರ್ಯಾಸ‌.
ಮದ್ಯ ಮಾರಾಟ ಮಾಡುವವರಿಗೆ ಸರ್ಕಾರ ಕೆಲ ನಿಯಮಾವಳಿಗಳ ಪ್ರಕಾರ ಷರತ್ತುಬದ್ಧ ವಾಗಿ ಲೈಸೆನ್ಸ್ ನೀಡಿರುತ್ತದೆ ಆದರೆ ಮುಂಡಗೋಡ ಪಟ್ಟಣದ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕಿರಾಣಿ ಅಂಗಡಿಯಲ್ಲೂ ಮದ್ಯ ಮಾರಾಟ ಮಾಡಲಾಗುತ್ತಿದೆ.
ಜವಾಬ್ದಾರಿಯುತ ಸಮಾಜ ನಿರ್ಮಾಣ ಮಾಡಬೇಕಾದ ಈಗಿನ ಕಾಲಘಟ್ಟದಲ್ಲಿ ಈ ರೀತಿಯಾಗಿ ಮದ್ಯ ಎಲ್ಲಿ ಬೇಕೆಂದರಲ್ಲಿ ಸಿಗುವಂತೆ ಮಾಡಿದರೆ ಯುವಕರು ಜವಾಬ್ದಾರಿ ಮರೆತು ಕುಡಿತಕ್ಕೆ ದಾಸರಾಗಿ ಅಧಃಪತನ ಆಗುವ ಅಪಾಯ ಭವಿಷ್ಯದಲ್ಲಿ ಇದ್ದೇ ಇದೆ ಇನ್ನಾದರೂ ಸಂಬಂಧ ಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳುವರೆ ಎಂಬುದನ್ನು ಕಾದು ನೋಡಬೇಕಿದೆ.
-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ