ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪೆಟ್ರೋಲ್ ಬಂಕಿನಲ್ಲಿ ಪೆಟ್ರೋಲ್ ಹಾಕಿದರೆ ನೀರು ಬರುತ್ತಿದೆ


ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಗರದ ಸಿಂಧನೂರು ರಸ್ತೆ ಬಳಿ ಇರುವ ರಿಲಯನ್ಸ್ ಪೆಟ್ರೋಲ್ ಬಂಕಿನಲ್ಲಿ ವಾಹನಗಳಿಗೆ ದುಡ್ಡು ಕೊಟ್ಟು ಪೆಟ್ರೋಲ್ ಹಾಕಿಸಿದರೆ ಅದರಲ್ಲಿ ನೀರು ಮಿಶ್ರಿತ ಪೆಟ್ರೋಲ್ ಬರುತ್ತಿದೆ
ನೀರು ಮಿಶ್ರಿತ ಪೆಟ್ರೋಲ್ ನಿಂದಾಗಿ ಪೆಟ್ರೋಲ್ ಹಾಕಿಸಿಕೊಂಡ ಅನೇಕ ವಾಹನಗಳು ಜಖಂಗೊಂಡಿದ್ದು ಅನೇಕ ವಾಹನ ಮಾಲೀಕರು ಮತ್ತು ಸವಾರರು ರಿಲಯನ್ಸ್ ಪೆಟ್ರೋಲ್ ಬಂಕಿನ ಮುಂದೆ ಬಂದು ತಮ್ಮ ವಾಹನಗಳಿಂದ ನೀರು ಮಿಶ್ರಿತ ಪೆಟ್ರೋಲ್ ಅನ್ನು ಬಾಟಲ್ ಗಳಲ್ಲಿ ಹೊರತೆಗೆದು ಮಾಲೀಕರುಗಳಿಗೆ ತೋರಿಸಿದರು
ಇದರಿಂದ ಎಚ್ಚೆತ್ತುಕೊಂಡ ಮಾಲೀಕರು ಪೆಟ್ರೋಲ್ ಪಂಪ್ ನಿಂದ ಡ್ರಮ್ಮೊಂದಕ್ಕೆ ಪೆಟ್ರೋಲ್ ತೆಗೆಸಿದರೆ ಡ್ರಮ್ ತುಂಬಾ ನೀರು ಬಂದಿದೆ ಇದರಿಂದಾಗಿ ವಾಹನ ಸವಾರರು ಮತ್ತು ಮಾಲೀಕರು ಕುಪಿತಗೊಂಡಿದ್ದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಾಹನಗಳು ಈ ರೀತಿ ಆಗಿರುವುದಕ್ಕೆ ಮಾಲೀಕರ ಬಗ್ಗೆ ಆಕ್ರೋಶ ಭರಿತವಾದ ಮಾತುಗಳನ್ನು ಆಡಿದರು
ಈ ಸಂದರ್ಭದಲ್ಲಿ ಪೆಟ್ರೋಲ್ ಬಂಕ್ ಮಾಲಿಕರಿಗೂ ಮತ್ತು ವಾಹನ ಸವಾರ, ಮಾಲೀಕರಿಗಳಿಗೂ ತೀವ್ರ ಮಾತುಗಳು ಬೆಳೆದು ವಾಹನಗಳನ್ನು ಸರಿಪಡಿಸಿ ಕೊಡುವಂತೆ ವಾಹನ ಸವಾರರು ಮತ್ತು ಮಾಲೀಕರುಗಳು ಪೆಟ್ರೋಲ್ ಬಂಕ್ ಮಾಲೀಕರನ್ನು ಒತ್ತಾಯಿಸಿದರು.
-ಪವನ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ