ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾತೃಭಾಷೆಗೆ ಒತ್ತು ನೀಡಿ:ಶಾಸಕ ವೆಂಕಟರಮಣಪ್ಪ


ಪಾವಗಡ:ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಕನ್ನಡ ನಾಡಿನಲ್ಲಿ ಮಾತೃಭಾಷೆ ಒತ್ತು ನೀಡಬೇಕು ಮತ್ತು ಕನ್ನಡವನ್ನೇ ಬಳಸಬೇಕು ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.
ಗ್ರಾಮದ ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಲಿ ವತಿಯಿಂದ ಶನಿವಾರದಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಪಾಠಶಾಲೆ ಆವರಣದಲ್ಲಿ 67 ನೇ ಕರ್ನಾಟಕ ಕನ್ನಡ ರಾಜ್ಯೋತ್ಸವ ಮತ್ತು ಮಂಡಲಿಯ 37ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದು ಗಡಿ ಪ್ರದೇಶವಾಗಿತ್ತು ನಾವು ಮಾತನಾಡಲು ಹೆಚ್ಚಿನದಾಗಿ ತೆಲುಗು ಬಳಸುತ್ತೇವೆ, ಓದಲು ಬರೆಯಲು ಕನ್ನಡ ಭಾಷೆ ಬಳಸುತ್ತೇವೆ. ಇನ್ನು ಮುಂದೆ ಮನೆಮನೆಗಳಲ್ಲಿ ಕನ್ನಡ ಭಾಷೆ ಮಾತನಾಡಬೇಕು ಕನ್ನಡ ಭಾಷೆಗೆ ಹೆಚ್ಚಿನ ಒತ್ತನ್ನು ನೀಡಬೇಕು. ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಲಿಯು ಪ್ರತಿವರ್ಷ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸುತ್ತದೆ. ಕಳೆದ 2 ವರ್ಷಗಳಿಂದ ಕೋವಿಡ್ ನಿಂದ ನಿಂತು ಈಗ ನಡೆಯುತ್ತಿರುವ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಭಾಗವಹಿಸಿರುವುದು ಸಂತೋಷ ತರುತ್ತಿದೆ ಎಂದರು.
ಗಡಿನಾಡಿನಲ್ಲಿ ಕನ್ನಡ ಕಟ್ಟುವುದು ತುಂಬಾ ಕಷ್ಟದ ಕೆಲಸ. ಆದಾಗ್ಯೂ ಈ ಪ್ರದೇಶದಲ್ಲಿ ಮಂಡಲಿ ಸತತ 37 ವರ್ಷಗಳಿಂದ ಕನ್ನಡ ಚಟುವಟಿಕೆಗಳ ಮೂಲಕ ಕನ್ನಡ ಜಾಗೃತಿ ಮೂಡಿಸಿರುತ್ತಿದ್ದಾರೆ. ಈ ಬಾರಿ ರಾಜ್ಯಮಟ್ಟದ ನಾಟಕೋತ್ಸವ ಹಮ್ಮಿಕೊಂಡು ಕಲಾದೇವಿಯನ್ನು ಆರಾಧಿಸುತ್ತಿರುವುದು ಹೆಮ್ಮೆಯ ಕೆಲಸ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸ್ಥಳೀಯ ಪ್ರತಿಭೆ ಎಚ್.ವೈ.ರಾಮಮೂರ್ತಿ ರವರ ಒಕ್ಕೊರಲ ಕನ್ನಡ ಯುಟ್ಯೂಬ್ ಚಾನೆಲ್ ಅನಾವರಣಗೊಳಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮಂಡಲಿಯ ಕಲಾವಿದರಿಂದ ನಾಟಕ ಪ್ರದರ್ಶನ ನೆರವೇರಿತು.
ಗ್ರಾ.ಪಂ ಅಧ್ಯಕ್ಷೆ ಹನುಮಕ್ಕ, ಉಪಾಧ್ಯಕ್ಷೆ ನಾಗಮಣಿ, ಸದಸ್ಯ ಕೇಶವಮೂರ್ತಿ, ಎನ್.ಆರ್.ಅಶ್ವಥಕುಮಾರ್, ಸಾದಿಖ್ ಸಾಬ್, ಪೂಜಾರಿ ಚೌಡಪ್ಪ, ಎಸ್.ಎಂ.ಗ್ಯಾನ್ ಏಜೆನ್ಸಿಯ ಮುನ್ನಾ, ಚೌಡೇಶ್ವರಿ ಕಾನ್ವೆಂಟಿನ್ ಮು.ಶಿ ರಾಜಪ್ಪ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ