ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಂಪಿ‌ ಕನ್ನಡ ವಿವಿಯಿಂದ ಶಿಕ್ಷಕಿ ಎಂ.ಕಮಲಮ್ಮ‌ ಅವರಿಗೆ ಪಿಎಚ್.ಡಿ. ಪದವಿ

ರಾಮನಗರ, ಡಿ.3
ಶಿಕ್ಷಕಿ ಎಂ.ಕಮಲಮ್ಮ‌ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಪ್ರಸ್ತುತ ಪಡಿಸಿದ “ಮೈಸೂರು ಕರ್ನಾಟಕ ವೃತ್ತಿ ರಂಗಭೂಮಿಯಲ್ಲಿ ಮಹಿಳಾ ಅಸ್ಮಿತೆಯ ಹುಡುಕಾಟ” ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ಲಭಿಸಿದೆ.
ಇವರು ಮೈಸೂರಿನ ಕುವೆಂಪು ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಎಚ್.ಪಿ.ಗೀತಾ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡನೆ ಮಾಡಿದ್ದಾರೆ. ಮಂಡ್ಯದ ಕರ್ನಾಟಕ ಸಂಘದ ಎಂ.ಎಲ್. ಶ್ರೀಕಂಠೇಶ ಗೌಡ ಸಂಶೋಧನಾ ಕೇಂದ್ರದಲ್ಲಿ ಅಧ್ಯಯನ ಸಂಶೋದನೆ‌ ಕೈಗೊಂಡಿದ್ದರು.

ಇವರು ಪ್ರಸ್ತುತ ರಾಮನಗರದ ಮೊರಾರ್ಜಿ ವಸತಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೊತ್ತರ ಪದವಿ ಪಡೆದಿದ್ದು, ರಾಜ್ಯಕ್ಕೆ 5 ನೇ ರ್ಯಾಂಕ್ ಪಡೆದಿದ್ದರು.

“ಶಿವರಾಮ ಕಾಡನಕುಪ್ಪೆ ಅವರ
ಸಾಹಿತ್ಯ” ಕುರಿತ ಅಧ್ಯಯನ ಮಂಡನೆಗೆ 2013 ರಲ್ಲಿ‌ ಹಂಪಿ‌ ಕನ್ನಡ ವಿಶ್ವವಿದ್ಯಾಲಯದಿಂದ ಎಂ.ಫಿಲ್ ಪದವಿ ಪಡೆದುಕೊಂಡಿದ್ದಾರೆ.

ಇವರು ಇದೀಗ ಮಹಿಳಾ ರಂಗಭೂಮಿಯ ಬಗ್ಗೆ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗಾ ಸೇರಿದಂತೆ ಹಳೆ ಮೈಸೂರು ಪ್ರದೇಶದ ಜಿಲ್ಲೆಗಳಲ್ಲಿನ ಮಹಿಳಾ ವೃತ್ತಿ ರಂಗಭೂಮಿ‌ ಬಗ್ಗೆ ಕಳೆದ ಆರು ವರ್ಷಗಳಿಂದ ಮೈಸೂರಿನ ಕುವೆಂಪು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಎಚ್.ಪಿ.ಗೀತಾ ಅವರ ಮಾರ್ಗದರ್ಶನದಲ್ಲಿ “ಮೈಸೂರು ಕರ್ನಾಟಕ ವೃತ್ತಿ ರಂಗಭೂಮಿಯಲ್ಲಿ ಮಹಿಳಾ ಅಸ್ಮಿತೆಯ ಹುಡುಕಾಟ” ಎಂಬ ವಿಷಯದ ಮೇಲೆ ಸಮಗ್ರ ಅಧ್ಯಯನ‌ ಮತ್ತು ಕ್ಷೇತ್ರ ಕಾರ್ಯ ನಡೆಸಿದ್ದರು. ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ