ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ಸಚಿವ ವಿ ಸೋಮಣ್ಣ ವಿರುದ್ಧ ಬಿಜೆಪಿ ಕಾರ್ಯಕರ್ತರ ಅಸಮಾಧಾನ

ಉಸ್ತುವಾರಿ ಸಚಿವ ವಿ ಸೋಮಣ್ಣ ಹನೂರು ಬಿಜೆಪಿ ಕಚೇರಿಗೆ ಬಂದಂತ ಸಂಧರ್ಭದಲ್ಲಿ ಘಟನೆ ಜರುಗಿದೆ,

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 12ನೇ ತಾರೀಖು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು ಹನೂರು ಪಟ್ಟಣದಲ್ಲಿ ವಿವಿಧ ಕಾಮಗರಿಗಳ ಶಂಕು ಸ್ಥಾಪನೆ ನೆರವೇರಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ,

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಮರಾಜನಗರ ಜಿಲ್ಲೆಗೆ ಆಗಮನದ ಹಿನ್ನಲೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ ಸೋಮಣ್ಣ ಜಿಲ್ಲಾಧ್ಯಂತ ಪಕ್ಷದ ಕಾರ್ಯಕರ್ತರು ಹಾಗೂ ಅಧಿಕಾರಿಗಳ ಜೊತೆ ಸಭೆಗಳನ್ನು ನೆಡಸುತ್ತಿದ್ದಾರೆ, ಈ ವೇಳೆ ಕಾರ್ಯಕರ್ತರ ಸಭೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಮುಖಂಡರನ್ನ ವೇದಿಕೆಯಲ್ಲಿ ಕೇವಲವಾಗಿ ಮಾತಾಡಿಸಿ ತೇಜೋವದೆ ಮಾಡುತ್ತಿದ್ದಾರೆ ಎಂದು ಕೆಲವು ಕಾರ್ಯಕರ್ತರು ತೀವ್ರವಾಗಿ ಅಸಮಾಧಾನ ಹೊರಹಾಕಿದ್ದರು, ಕ್ಷೇತ್ರದಲ್ಲಿ ಪಕ್ಷಕ್ಕಾಗಿ ದುಡಿಯುತ್ತಿರುವವರನ್ನ ಹಾಗೂ ಮುಖಂಡರನ್ನ ಹೀಯಾಳಿಸುವುದು ಎಷ್ಟರ ಮಟ್ಟಿಗೆ ಸರಿ ಬಿಜೆಪಿ ಪಕ್ಷದ ಮಂತ್ರಿಯಾಗಿ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ನರೇಂದ್ರ ರವರನ್ನು ಹೊಗಳಿ ಕೊಂಡಾಡುತ್ತಾರೆ, ಇದು ಪಕ್ಷಕ್ಕೆ ಮುಂದಿನ ಚುನಾವಣೆಗೆ ತೊಂದರೆಯಾಗುವುದಿಲ್ವಾ ಈಗಾಗಲೇ ಹನೂರು ಬಿಜೆಪಿ ಪಕ್ಷದಲ್ಲಿ ಎರಡು ಮೂರು ಗುಂಪುಗಳು ಇದ್ದು ಕಳೆದ ಹದಿನೈದು ವರ್ಷದಿಂದ ನಮ್ಮ ಬಿಜೆಪಿ ಪಕ್ಷ ಇಲ್ಲಿ ಗೆದ್ದಿಲ್ಲ ಕಾರ್ಯಕರ್ತರು ವನವಾಸ ಮಾಡುತ್ತಿದ್ದೇವೆ ಅದನ್ನ ಸರಿಪಡಿಸಿ ನಮ್ಮ ಅಭ್ಯರ್ಥಿ ಗೆಲ್ಲುವ ರೀತಿ ಮಾಡಬೇಕು ಇವರ ಮಾತುಗಳಿಂದ ಬೇರೆ ಪಕ್ಷದವರಿಗೆ ಲಾಭವಾಗುತ್ತದೆ ಒರತು ನಮ್ಮ ಪಕ್ಷಕ್ಕೆ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಘಟನೆ ವಿ ಸೋಮಣ್ಣ ಹನೂರು ಬಿಜೆಪಿ ಕಚೇರಿಗೆ ಕಾರ್ಯಕರ್ತರ ಸಭೆಗೆ ಬಂದಂತ ಸಂಧರ್ಭದಲ್ಲಿ ಜರುಗಿತ್ತು.

ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ