ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ವಿಜಯನಗರ ಜಿಲ್ಲೆ ಕೊಟ್ಟೂರು:
ಗಂಗೋತ್ರಿ ಬಿ.ಎಸ್.ಡಬ್ಲ್ಯೂ.ಪದವಿ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಶ್ರೀ ಎಂ.ಎಸ್.ಶಿವನಗುತ್ತಿ ಇವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಆಡು ಮುಟ್ಟದ ಸೊಪ್ಪಿಲ್ಲ,ಸಮಾಜಕಾರ್ಯಕರ್ತ ಮಾಡದ ಕೆಲಸವಿಲ್ಲ. ಎಂಬ ನುಡಿಯಂತೆ ಸಮಾಜ ಕಾರ್ಯದ ವೈಶಿಷ್ಟತೆಯನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ಇಂತಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡಿಯುತ್ತಿರುವುದು ನಿಮ್ಮೆಲ್ಲರ ಭಾಗ್ಯ ಏಕೆಂದರೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು, ಸಂಸ್ಕಾರ, ಸಾಮರಸ್ಯದ ಜೀವನದ ಅಂಶಗಳನ್ನು ವಿದ್ಯಾರ್ಥಿಗಳಿಗೆ ಮೈಗೂಡಿಸಿಕೊಳ್ಳುವಂತೆ ಮಾಡುತ್ತದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಕನಸನ್ನು ನನಸಾಗಲು ಬೆನ್ನೆಲುಬಾಗಿ ನಿಲ್ಲುತ್ತದೆ. ಎಂದು ಉದ್ಘಾಟನಾ ನುಡಿಗಳನ್ನು ಆಡಿದರು. ನಂತರ ಕಾರ್ಯಕ್ರಮವನ್ನೂ ಉದ್ದೇಶಿಸಿ ಶ್ರೀಮತಿ ರಚನಾ ರಜತ್ ನಿರ್ದೇಶಕರು ಶ್ರೀ ಗುರು ಬಸವೇಶ್ವರ ವಿಧ್ಯಾಭಿರುದ್ಧಿ ಸಂಸ್ಥೆ ಇವರು ಮಾತನಾಡಿ ಇಂದಿನ ಯುವ ಸಮೂಹ ಉನ್ನತ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ನಮ್ಮ ಶಿಕ್ಷಣ ಸಂಸ್ಥೆಯು ಸದಾಕಾಲ ನಿಮ್ಮೊಂದಿಗೆ ಇದೆ ಎಂದು ತಿಳಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀಮತಿ ನಿರ್ಮಲ ಶಿವನ ಗುತ್ತಿ ಪ್ರಾಂಶುಪಾಲರು ಭಾಗೀರಥಿ ಪದವಿ ಪೂರ್ವ ಕಾಲೇಜು ಇವರು ವಿದ್ಯಾರ್ಥಿಗಳ ಕುರಿತು ಮಾತನಾಡುತ್ತಾ ಇಂದಿನ ವಿದ್ಯಾರ್ಥಿಗಳು ಮೊಬೈಲ್ ದಾಸರಗುತಿದ್ದಾರೆ, ಮೊಬೈಲ್ ಉತ್ತಮ ಕೆಲಸಗಳಿಗೆ ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುಬಸವರಾಜ ಎ.ಎಂ.ಎಂ.ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀ ಮರುಳಪ್ಪ ಕೆ, ಶ್ಯಾಮರಾಜ್ ಟಿ,ಶಶಿಕಿರಣ ಕೆ,ಕೊಟ್ರೇಶ ಪಿ.ಕೆ.ಎಂ, ಉಪಸ್ಥಿತಿ ಇದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಚಂದನ ಕೆ.ಜಿ. ಸ್ವಾಗತಿಸಿದರು,ಪ್ರಿಯಾಂಕ ವಂದಿಸಿದರು,ಸೂರ್ಯ ಆರ್. ನಿರೂಪಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ