ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ:ಉತ್ತಮ ಸ್ಪಂದನೆ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮೀಣ ಪ್ರದೇಶದ ಜನತೆ ತಾಲ್ಲೂಕು ಮಟ್ಟದ ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಸರ್ಕಾರವು ರೂಪಿಸಿದೆ ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.
ಹೋಬಳಿಯ ರಂಗಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಭಾಗವಹಿಸುತ್ತಾರೆ. ತಮ್ಮ ಗ್ರಾಮದ ಕುಂದು ಕೊರತೆಗಳ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅರ್ಜಿಯನ್ನು ನೀಡಬಹುದಾಗಿದೆ. ಸ್ಥಳದಲ್ಲೇ ಅಧಿಕಾರಿಗಳು ಸಮಸ್ಯೆಗಳ ಬಗ್ಗೆ ಕ್ರಮ ವಹಿಸುತ್ತಾರೆ ಇದೊಂದು ಸರ್ಕಾರದ ಒಳ್ಳೆಯ ಕಾರ್ಯಕ್ರಮವಾಗಿದೆ ಎಂದರು.
ಶೀಘ್ರದಲ್ಲೇ ಪ್ರತಿಮನೆಗೂ ನೀರಿನ ಸೌಲಭ್ಯ,ಶಾಲಾ, ಕಾಲೇಜು ಹಾಸ್ಟೆಲ್ ಕಟ್ಟಡಗಳ ಉದ್ಘಾಟನೆ,ರಸ್ತೆಗಳ ದುರಸ್ತಿ ಮತ್ತು ನೂತನ ರಸ್ತೆಗಳ ನಿರ್ಮಾಣ ಮಾಡಲಾಗುವುದು.ಈಗಾಗಲೇ ತಾಲ್ಲೂಕಿನಲ್ಲಿ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಶೇ ೯೦ ರಷ್ಟು ಮುಗಿದಿದ್ದು,ಕೆಲವೇ ತಿಂಗಳಿನಲ್ಲಿ ಉದ್ಘಾಟನೆ ಮಾಡಲಿದ್ದೇವೆ. ಸುಮಾರು ೧೦೦ ಹಳ್ಳಿಗೆ ಐಮ್ಯಾಕ್ಸ್ ಲೈಟುಗಳನ್ನು ಅಳವಡಿಸಿದೆ,ತಾಲ್ಲೂಕಿನ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.
ತಹಶೀಲ್ದಾರ್ ವರದರಾಜುರವರು ಮಾತನಾಡಿ, ತಾಲ್ಲೂಕಿನಾಧ್ಯಂತ ವಿವಿಧ ಇಲಾಖೆಗಳ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ.ಪ್ರತಿ ಇಲಾಖೆಯಲ್ಲಿನ ಸೌಲಭ್ಯಗಳ ವಿವರಗಳನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಅಗತ್ಯವಾದವರು ಅರ್ಜಿಗಳನ್ನು ಸಲ್ಲಿಸಿದರೆ ಅವುಗಳನ್ನು ಸಂಬಂಧಿಸಿದ ಇಲಾಖೆಗೆ ಕಳುಹಿಸಿ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ವಿವಿಧ ಸಾಮಗ್ರಿಗಳನ್ನು ಹಾಗೂ ಫಲಾನುಭವಿಗಳಿಗೆ ಮಾಶಾಸನ ಪತ್ರಗಳನ್ನು ಹಾಗೂ ವಸತಿ ಫಲಾನುಭವಿಗಳಿ ಮಂಜೂರಾತಿ ಪತ್ರಗಳನ್ನು ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸುಮಾರು ೨೧ ಅಹವಾಲು ಅರ್ಜಿಗಳನ್ನು ಸಾರ್ವಜನಿಕರು ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸುರೇಂದ್ರ, ಹಾಲುಒಕ್ಕೂಟದ ಅಧ್ಯಕ್ಷ ಚಂದ್ರಶೇಖರರೆಡ್ಡಿ, ಮುಖಂಡರಾದ ಮಾರಪ್ಪ, ಮಹಲಿಂಗಪ್ಪ, ಉಪತಹಶೀಲ್ದಾರ್ ಕಿರಣ್ ಕುಮಾರ್, ಶಿರಸ್ಥೆದಾರರಾದ ನರಸಿಂಹಮೂರ್ತಿ,ಪಿ.ಡಬ್ಲ್ಯೂಡಿ ಇಂಜಿನಿಯರ್ ಅನಿಲ್ ಕುಮಾರ್, ಹನುಮಂತರಾಯಪ್ಪ,ಕೃಷಿ ಇಲಾಖೆಯ ವಿಜಯಮೂರ್ತಿ,ಟಿಪಿಓ ಚಿದಾನಂದಸ್ವಾಮಿ,ವೈದ್ಯ ರೆಡ್ಡಪ್ಪ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ