ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಶಾಸಕ ಶರಣಬಸಪ್ಪ ಗೌಡ ದರ್ಶನಾಪುರ ಹಣ ಬಿಡುಗಡೆ

ಕೆಂಭಾವಿ: ಶರಣಬಸಪ್ಪಗೌಡ ದರ್ಶನಾಪೂರ ರವರು ಪಟ್ಟಣದಲ್ಲಿ ಶಾಶ್ವತ ಕುಡಿಯುವ ಯೋಜನೆಯ ಸರ್ಕಾರ ಹಣ ಬಿಡುಗಡೆ ಮಾಡಿದ್ದು. ಶೀಘ್ರದಲ್ಲೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಹೇಳಿದರು.
ಪಟ್ಟಣದ ಶಾಸಕರ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೃತ ಯೋಜನೆ-೨ ರಲ್ಲಿ ೬೮ ಕೋಟಿ ಗಳ ವೆಚ್ಚದಲ್ಲಿ ಮೊದಲ ಹಂತದ ಹಣ ಬಿಡುಗಡೆ ಮಾಡಿದ್ದು.ಅತಿ ಶೀಘ್ರದಲ್ಲೇ ಪುರಸಭೆ ವ್ಯಾಪ್ತಿಗೆ ಬರುವ ಎಲ್ಲಾ ವಾರ್ಡ್ ಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿದೆ ಎಂದರು.
ಮಲ್ಲಾ- ಕೆಂಭಾವಿ ೧೦ ಕಿ.ಮೀ ರಸ್ತೆ ದುರಸ್ತಿಗೆ ೧ ಕೋಟಿ ೨೦ ಲಕ್ಷ ರೂಗಳ ಅನುದಾನದಲ್ಲಿ ಟೆಂಡರ್ ಆಗಿದ್ದು ಮುಂದಿನ ವಾರದಲ್ಲಿ ರಸ್ತೆ ಕಾರ್ಯ ಮುಗಿಯಲಿದೆ.
ಕೆಂಭಾವಿ-ಗುತ್ತಿ ಬಸವಣ್ಣ ರಸ್ತೆಯ ಕಾಮಗಾರಿ ನನೆಗುದಿಗೆ ಬಿದ್ದಿರುವ ೫೦೦ ಮೀಟರ್ ತಿರುವು ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ ದೊರೆಯಲಿದೆ ಎಂದು ಹೇಳಿದರು.ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಮರಿಗೌಡ ಹುಲಿಕಲ್,ಮಾಜಿ ಜಿಪಂ ಅಧ್ಯಕ್ಷ ಸಿದ್ದನಗೌಡ ಪಾಟೀಲ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ,ಶಿವಮಹಾಂತ ಚಂದಾಪುರ,ಪುರಸಭೆ ಸದಸ್ಯ ವಿಲಾಸ ದೇಶಪಾಂಡೆ, ರಾಘವೇಂದ್ರ ದೇಶಪಾಂಡೆ ಇನ್ನಿತರರು ಇದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ