ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರುಗಳು ಬಿ ವೆಂಕಟೇಶ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ

ಹನೂರು:ವಿಧಾನ ಸಭಾ ಕ್ಷೇತ್ರದಲ್ಲಿ 2023ರ ಚನಾವಣೆಗೆ ಸ್ಪರ್ದಿಸಲು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸಮಿತಿಯ ಬಿ.ವೆಂಕಟೇಶ್ ಟಿಕೆಟ್ ಆಕಾಂಕ್ಷಿಯಾಗಿದ್ದು ಟಿಕೆಟ್ ಘೋಷಣೆ ಮುನ್ನವೇ ಹಲವು ಮುಖಂಡರನ್ನು ಬಿಜೆಪಿಯ
ಬಿ ವೆಂಕಟೇಶ್ ರವರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. 
ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಸೇರಿದಂತೆ ಲೋಕ್ಕನ ಹಳ್ಳಿ ಹೊಸದೊಡ್ಡಿ ಚಿಕ್ಕರಂಗ ಶೆಟ್ಟಿ ದೊಡ್ಡಿ ತಮ್ಮದೇ ಆದ ಮತದಾರರನ್ನು ಹೊಂದಿದ್ದ ಮುಖಂಡರು ಜೆಡಿಎಸ್ ಹಾಗೂ ಕಾಂಗ್ರೇಸ್ ಪಕ್ಷ ಸಂಘಟನೆಗೂ ಸಹ ದುಡಿದಿದ್ದಾರೆ. ಕಾಂಗ್ರೇಸ್ ಹಾಗೂ ಜೆಡಿಎಸ್ ಪಕ್ಷ ತೊರೆದು
ಇದೀಗ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ.

ಇದೇ ವೇಳೆ‌ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಕೃಷ್ಣಮೂರ್ತಿ ಮಾತನಾಡುತ್ತಾ ಹನೂರು ಜಿಡಿಎಸ್ ನಲ್ಲಿ‌ ಕಳೆದ 10 ವರ್ಷಗಳಿಂದಲೂ ಸಹ ಗುರುತಿಸಿಕೊಂಡಿದ್ದೆನೆ ಆದರೆ ಜೆಡಿಎಸ್ ಪಕ್ಷವು
ಪ್ರಸ್ತುತ ಸಂದರ್ಭದಲ್ಲಿ ನಮ್ಮನ್ನು ನಂಬಿದವರ ನೋವಿಗೆ
ಸ್ಪಂದಿಸಿಲ್ಲ‌ ಆಗಾಗಿ ಜೆಡಿಎಸ್ ನಿಂದ ಹೊರ ಬಂದಿದ್ದೇನೆ.
ಬಿ. ವೆಂಕಟೇಶ್ ಅವರು ಹಲವರು ಜನಪರ ಸೇವಾ ಕಾರ್ಯಕ್ರಮ ಮಾಡುತ್ತ ಬಂದಿದ್ದಾರೆ ಆವರ ಕಾರ್ಯ‌ ವೈಕರಿ ಮೆಚ್ಚಿ ಸೇರಿದ್ದೇನೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಮಹದೇಶ್ವರಬೆಟ್ಟ ಗ್ರಾಮದ ಮುಖಂಡರಾದ ಮಹದೇಶಯ್ಯ, ಮಂಗಲ ಗ್ರಾಮ ಪಂಚಾಯಿತಿ ಸದಸ್ಯ ವರಪ್ರಸಾದ್,
ರಾಮಮೂರ್ತಿ, ಸಂತೋಷ್ ಕುಮಾರ್,  ಮಾದೇಶ್, ಕರಳಿ ಮಾದೇಗೌಡ ,ದಾಸಪ್ಪ, ನಾಗರಾಜು,  ರಂಗಶೆಟಟ್ಟಿ, ವಿನಯ್ ಕುಮಾರ್ ಮತ್ತಿತರು‌ ಹಾಜರಿದ್ದರು ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ