ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲ್ಯಾಣ ಕರ್ನಾಟಕ ಭಾಗದ ಪರಿಸರ ರಕ್ಷಣೆ ಮಾಡುವ ಕಾರ್ಯದಲ್ಲಿ ಅಮರೇಗೌಡ ಮಲ್ಲಾಪೂರ ಮೊದಲಿಗರು:ವೈದ್ಯಾಧಿಕಾರಿ ಜಯದುರ್ಗ

ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಆವರಣದಲ್ಲಿ ಬುಧವಾರ ಸಸಿನೆಡುವ ಕಾರ್ಯಕ್ರಮವನ್ನು ಆರೋಗ್ಯ ಅಧಿಕಾರಿ ಜಯದುರ್ಗ ಸಸಿನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಆರೋಗ್ಯಾಧಿಕಾರಿ ಜಯದುರ್ಗ ಪ್ರತಿಯೊಬ್ಬ ಮನುಷ್ಯನು ಆರೋಗ್ಯವಂತನಾಗಿರಬೇಕಾದರೆ ಗಾಳಿ, ನೀರು, ಆಹಾರ ಅತ್ಯಂತ ಮುಖ್ಯವಾಗಿರುತ್ತವೆ ಇವುಗಳನ್ನು ನಾವುಗಳೆಲ್ಲರೂ ಪರಿಸರದಿಂದ ಪಡೆಯುತ್ತೇವೆ,ಪರಿಸರ ಭೂಮಿ ಮೇಲಿರು ಪ್ರತಿಯೊಂದು ಜೀವಿಗೂ ಅತಿಮುಖ್ಯ,ಪರಿಸರವನ್ನು ಪ್ರತಿಯೊಬ್ಬರೂ ಕಾಪಾಡಬೇಕು,ಹೆಚ್ಚು ಹೆಚ್ಚು ಗಿಡಮರಗಳನ್ನು ಬೆಳೆಸಬೇಕು, ಇಂತಹ ಒಂದು ಕಾರ್ಯವನ್ನು ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮೊದಲಿಗೆ ಕೈಗೆತ್ತಿಕೊಂಡವರು ಅಂದರೆ ಅದು ವನಸಿರಿ ಫೌಂಡೇಶನ್ ಸಂಸ್ಥಾಪಕ ಅದ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರು,ಅವರು ಈಕಾರ್ಯಕ್ಕೆ ನಾವುಗಳೆಲ್ಲರೂ ಸಹಕಾರ ನೀಡಬೇಕು ನಾನು ಕೂಡ ಮೊದಲಿಗೆ ಪರಿಸರ ಪ್ರೇಮಿ ಇವಾಗ ವೈದ್ಯೆಯಾಗಿ ಕಾರ್ಯನಿರ್ವಹಿಸುತಿದ್ದೇನೆ ಇವರ ಪರಿಸರ ರಕ್ಷಣೆ ಕಾರ್ಯಕ್ಕೆ ನಾನು ಸದಾಕಾಲ ಬೆಂಬಲ ನೀಡುತ್ತೇನೆ ಅವರ ತಂಡ ಇನ್ನಷ್ಟು ಹೆಚ್ಚಿನ ಗಿಡಮರಗಳನ್ನು ಬೆಳಸಲಿ ರಾಜ್ಯಾದ್ಯಂತ ವನಸಿರಿ ಫೌಂಡೇಶನ್ ಕಾರ್ಯ ನಿರಂತರವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪೂರ,ಶರಣೇಗೌಡ ಹೆಡಗಿನಾಳ, ವೆಂಕಟರಡ್ಡಿ ಹೆಡಗಿನಾಳ, ರಾಜು ಪತ್ತಾರ ಬಳಗಾನೂರ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್, ವೀರಭದ್ರಯ್ಯ ಸ್ವಾಮಿ ತಿಮ್ಮಾಪೂರ ಮತ್ತು ಊರಿನ ಪ್ರಮುಖರು ಇದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ