ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಐಪಿಎಲ್ 2023ಕ್ಕೆ ಕೊನೆಗೂ ಆರ್‌ಸಿಬಿಗೆ ಯುವ ಕ್ರಿಕೆಟಿಗ ಸಿಂಧನೂರಿನ ಮನೋಜ್ ಭಂಡಾಜೆ ಆಯ್ಕೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಪ್ರತಿಭಾನ್ವಿತ ಹಾಗೂ ದೇಸಿ ಕ್ರಿಕೆಟ್‌ನಲ್ಲಿ ಸಾಕಷ್ಟು ಮಿಂಚಿರುವ ಮನೋಜ್ ಭಂಡಾಜೆ ಮೂಲ ಬೆಲೆ 20 ಲಕ್ಷ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡಿದ್ದಾರೆ.ಈ ಬಾರಿಯ ಹರಾಜಿನಲ್ಲಿ ಆರ್‌ಸಿಬಿ ತಂಡ ನಿರೀಕ್ಷಿತ ಮಟ್ಟದಲ್ಲಿ ಆಟಗಾರರ ಖರೀದಿಗೆ ಆಸಕ್ತಿ ತೋರಿಸಿಲ್ಲ ಈ ವರ್ತನೆ ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿದೆ ಸದ್ಯ ಅಪ್ಪಟ ಕನ್ನಡಿಗ ಮನೋಜ್ ಭಂಡಾಜೆ ಖರೀದಿ ಮಾಡಿದ್ದರಿಂದ ಆರ್‌ಸಿಬಿ ಅಭಿಮಾನಿಗಳು ಕೊಂಚ ಸಮಾಧಾನ ತಂದಿದೆ ರಾಯಚೂರು ಜಿಲ್ಲೆಯ ಸಿಂಧನೂರಿನ ಮನೋಜ್ ಭಂಡಾಜೆ ಆಲ್ರೌಂಡರ್ ಆಟಗಾರರಾಗಿದ್ದಾರೆ ಸದ್ಯ ಮನೋಜ್‌ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದರಿಂದ ಇಷ್ಟು ದಿನ ಒಬ್ಬನೇ ಒಬ್ಬ ಕನ್ನಡಿಗನಿಲ್ಲ ಎಂಬ ಕೊರಗು ನೀಗಿದೆ ಎನ್ನಬಹುದು.ಟೀಂ ಇಂಡಿಯಾಗೆ ಆಡಿದ ಪ್ರಮುಖ ಸದ್ಯ ಆರ್‌ಸಿಬಿ ತಂಡದಲ್ಲಿರುವ ಏಕೈಕ ಕನ್ನಡಿಗ ಆಟಗಾರ ಎಂಬ ಹೆಗ್ಗಳಿಕೆಗೆ ಮನೋಜ್ ಭಂಡಾಜೆ ಪಾತ್ರರಾಗಿದ್ದಾರೆ ಎಡಗೈ ಬ್ಯಾಟ್ಸ್‌ಮನ್ ಹಾಗೂ ಬಲಗೈ ಮಧ್ಯಮ ವೇಗದ ಬೌಲರ್ ಆಗಿರುವ ಮನೋಜ್ ಭಂಡಾಜೆ 2019ರಲ್ಲಿ ಸೈಯದ್ ಮುಷ್ತಾಕ್ ಆಲಿ ಟೂರ್ನಿ ಮೂಲಕ ದೇಶಿಯ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು ನಮ್ಮ ಸಿಂಧನೂರು ನಮ್ಮ ಹೆಮ್ಮೆ ಎಂದು ಸಿಂಧನೂರು ತಾಲೂಕಿನ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.
ವರದಿ-ವೆಂಕಟೇಶ ನಾಯಕ ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ