ಅಮರ ಶ್ರೀ ಆಲದ ಮರದ ಹತ್ತಿರ ವನಸಿರಿ ಫೌಂಡೇಶನ್ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸಸಿನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ, ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯದರ್ಶಿ ಸೋಮಣ್ಣ ಸುಕಲಪೇಟೆ, ತಾಲೂಕ ಅದ್ಯಕ್ಷ ವೀರಭದ್ರಪ್ಪ ಹಂಚಿನಾಳ, ಶ್ರೀ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಅದ್ಯಕ್ಷ ಮಂಜುನಾಥ ಕೊಟ್ನೆಕಲ್, ವನಸಿರಿ ಫೌಂಡೇಶನ್ ಜಾಲತಾಣದ ಅದ್ಯಕ್ಷ ಚನ್ನಪ್ಪ ಕೆ ಹೊಸಹಳ್ಳಿ, ಮಸ್ಕಿ ತಾಲೂಕ ಅದ್ಯಕ್ಷ ರಾಜು ಪತ್ತಾರ ಬಳಗಾನೂರ, ಭೂ ಸಂರಕ್ಷರಣಾ ವೇದಿಕೆ ತಾಲೂಕ ಅದ್ಯಕ್ಷ ಮುದಿಯಪ್ಪ ಹೊಸಳ್ಳಿ ಕ್ಯಾಂಪ್, ವನಸಿರಿ ಸದಸ್ಯರಾದ ರಂಜಾನ್ ಸಾಬ್ ಹಾಗೂ ಸಿಂಧನೂರು ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು,ಮಹಿಳೆಯರು ಭಾಗವಹಿಸಿದ್ದರು.




















