ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯಲ್ಲಿನ ಹಲವು ರೈತರ ಸಮಸ್ಯೆಗಳನ್ನು ಸಚಿವರೊಂದಿಗೆ ಚರ್ಚಿಸಿದ ಶಾಸಕ ಆರ್. ನರೇಂದ್ರ


ಚಾಮರಾಜನಗರ:ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಗ್ರಾಮಗಳಲ್ಲಿ ವಾಸಿಸುವ ರೈತರ ಸಮಸ್ಯೆಗಳನ್ನು ಬಗೆಹರಿಸಲು ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸೂಕ್ತವಾದ ರೀತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯಕ್ಕೆ ಸಭೆ ಮಾಡಲಾಯಿತು ಎಂದು ಶಾಸಕರಾದ ಆರ್ ನರೇಂದ್ರ ತಿಳಿಸಿದರು ಇದೇ ಸಮಯದಲ್ಲಿ ಮಾತನಾಡಿದ ಅವರು ನಮ್ಮ ಗ್ರಾಮಗಳ ಕೆಲವು ಸಮಸ್ಯೆಗಳನ್ನು
ವಿಧಾನಸಭಾ ಸೌಧದ ಸಮಿತಿ ಕೊಠಡಿ ಸಂಖ್ಯೆ 313 , 3ನೇ ಮಹಡಿ ವಿಧಾನಸೌಧ ಬೆಂಗಳೂರು ಇಲ್ಲಿ ” ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕು ಸತ್ತೇಗಾಲ (ಜಾಗೇರಿ) ಗ್ರಾಮ ವ್ಯಾಪ್ತಿಯ ರಿಸನಂ 174ರಲ್ಲಿನ ಸಕಾ೯ರಿ ಜಮೀನಿನಲ್ಲಿ ಸುಮಾರು ವಷ೯ಗಳಿಂದ ಸಾಗುವಳಿ ಮಾಡುತ್ತಿರುವ ರೈತರುಗಳಿಗೆ ಪ್ರಸ್ತಾಪಿತ ಜಮೀನಿನ ಹಕ್ಕು ಪತ್ರ ನೀಡುವ ಕುರಿತಂತೆ ಸಭೆ ನಡೆಸಲಾಯಿತು ಎಂದು ತಿಳಿಸಿದರು .
ಇದೇ
ಸಭೆಯಲ್ಲಿ ಶಾಸಕರಾದ

ಶ್ರೀ ಎನ್.ಮಹೇಶ್, ಸಕಾ೯ರದ ಅಪರ ಮುಖ್ಯ ಕಾಯ೯ದಶಿ೯ ಅರಣ್ಯ ಇಲಾಖೆ, ಸಕಾ೯ರದ ಪ್ರಧಾನ ಕಾಯ೯ದಶಿ೯ಗಳು( ಕಂದಾಯ ಇಲಾಖೆ),ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು,ಆಯುಕ್ತರು, ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಅಪರ ಜಿಲ್ಲಾಧಿಕಾರಿ,ಡಿಸಿಎಫ್,ಎಸಿ ಕೊಳ್ಳೇಗಾಲ, ಡಿಡಿಎಲ್ಆರ್ ಚಾಮರಾಜನಗರ ಮತ್ತು ಕೊಳ್ಳೇಗಾಲ ತಹಸೀಲ್ದಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ