ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ಕ್ಷೇತ್ರದಲ್ಲಿ ಶೋ ಆಫ್ ರಾಜಕಾರಣಿಗಳೆ ಹೆಚ್ಚಾಗಿದ್ದಾರೆ : ಜವಾದ್ ಅಹ್ಮದ್ ಮಾಜಿ ತಾಲೂಕು ಪಂಚಾಯಿತಿ ಸದಸ್ಯ

ಹನೂರು :ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸುವ ಹಿನ್ನಲೆಯಲ್ಲಿ ನಮ್ಮ ಕ್ಷೇತ್ರದಿಂದ ಹೆಚ್ವಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಯಾಗಿ ಮಾಡೋಣ ಎಂದು ಬಂಡಳ್ಳಿ ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯರಾದ ಜಾವೇದ್ ಅಹ್ಮದ್ ತಿಳಿಸಿದರು .
ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ರಾಷ್ಟ್ರೀಯ ನಾಯಕರುಗಳು ಆಗಮಿಸುವ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಕಾರ್ಯಕರ್ತರನ್ನು ಕರೆತರಲು ಶಾಸಕರು ಪೂರ್ವಭಾವಿ ಸಭೆಯನ್ನು ಆಯೋಜಿಸಿದ ಸಮಯದಲ್ಲಿ ಮಾತನಾಡಿದ ಅವರು ನಮ್ಮ ಪಕ್ಷವು ಮಹಿಳೆಯರಿಗೆ ಹೆಚ್ವು ಅಧಿಕಾರ ನೀಡುವುದರಲ್ಲಿ ಮೊದಲನೆ ಸ್ಥಾನ ಪಡೆದಿದೆ ಅಲ್ಲದೆ ಮಹಿಳೆಯರಿಗಾಗಿಯೆ ನಮ್ಮ ಸರ್ಕಾರದ ಸಮಯದಲ್ಲಿ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ ಆದ್ದರಿಂದ ಮಹಿಳೆಯರೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹುಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಡಬೇಕೆಂದರು .ಇದೇ ಸಮಯದಲ್ಲಿ ನಮ್ಮ‌ ಗ್ರಾಮದಲ್ಲಿ ದೇವಾಲಯವನ್ನು ಗ್ರಾಮಸ್ಥರು ಮತ್ತು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿಧಿಯಿಂದ ಹಣಕಾಸು ನೆರವು ನೀಡಿ ಕಟ್ಟಿಸಲಾಗಿದೆ ,ಆದರು ನಾವು ಶೋ ಆಫ್ ಮಾಡಲು ಹೋಗುವುದಿಲ್ಲ ಆದರೆ ಕೆಲವರು ಕೇವಲ ನೀರಿನ ಪಂಪ್ ಹೊಡಿಸಿದರೆ ಸಾಕು ನಾವೆ ದೇವಾಲಯವನ್ನು ಕಟ್ಟಿಸಿದ್ದು ಎಂದು ಶೋ ಕೊಡುತ್ತಾರೆ ಇಂತಹ ಸಂದರ್ಭದಲ್ಲಿ ನಮ್ಮ ನಾಯಕರು ಮಾಡಿರುವ ಪ್ರಾಮಾಣಿಕ ಕೆಲಸ ಕಾರ್ಯಗಳನ್ನು ಜನತೆಯ ಮುಂದಿಡುವ ಕಾರ್ಯ ಆಗಬೇಕು ಎಂದು ತಿಳಿಸಿದರು .ಇದೇ ಸಂದರ್ಭದಲ್ಲಿ ಶಾಸಕರಾದಿಯಾಗಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ