ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಮಫಲಕದಲ್ಲಿ ಕನ್ನಡ ಬಳಸುವಂತೆ
ನಗರಪಾಲಿಕೆ ಆದೇಶ: ಡಾ.ಭೇರ್ಯ ರಾಮಕುಮಾರ್

ಮೈಸೂರು:- ಜ17. ನಗರದ ಮಾನಸ ಗಂಗೋತ್ರಿಯ ಜಯಚಾಮರಾಜೇಂದ್ರ ತಾಂತ್ರಿಕ ಕಾಲೇಜು ಮುಂಭಾಗ ಹಾಗೂ ಮೈಸೂರು-ಕೆ.ಆರ್.ಎಸ್. ರಸ್ತೆಯ ಇ.ಎಸ್.ಐ. ಆಸ್ಪತ್ರೆ ಎದುರಿಗೆ ಇರುವ ಬಸ್ ನಿಲ್ದಾಣಗಳಲ್ಲಿ ಜೆ.ಕೆ.ಟೈರ್ ಕಂಪೆನಿಯ ವತಿಯಿಂದ ಅಳವಡಿಸಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಸುವಂತೆ ಮೈಸೂರು ಮಹಾ ನಗರಪಾಲಿಕೆಯು ಸದರಿ ಸಂಸ್ಥೆಗೆ ಆದೇಶ ನೀಡಿದೆ.ಜೆ.ಕೆ.ಟೈರ್ ಸಂಸ್ಥೆಯ ವತಿಯಿಂದ ಮಾನಸ ಗಂಗೋತ್ರಿಯ ಜೆ.ಸಿ.ಇ. ಬಳಿ ಹಾಗೂ ಕೆ.ಆರ್.ಎಸ್. ರಸ್ತೆಯ ಇ.ಎಸ್.ಐ. ಆಸ್ಪತ್ರೆ ಬಳಿ
ಇರುವ ಬಸ್ ನಿಲ್ದಾಣಗಳಲ್ಲಿ ಆಂಗ್ಲ ಭಾಷಾ ನಾಮಫಲಕಗಳನ್ನು ಅಳವಡಿಸಲಾಗಿದೆ ಕನ್ನಡ ಭಾಷೆಯ ಬಗ್ಗೆ ನಿರ್ಲಕ್ಷ್ಯ ತೋರಲಾಗಿದೆ ಎಂದು ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ಡಾ.ಭೇರ್ಯ ರಾಮಕುಮಾರ್ ಕನ್ನಡ ಅಭಿವೃದ್ದಿ ಪ್ರಾಧಿಕಾರಕ್ಕೆ ೧೯-೧೨-೨೦೨೨ ರಂದು ದೂರು ನೀಡಿದ್ದರು. ಸದರಿ ದೂರನ್ನು ಪರಿಶೀಲಿಸಿದ ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ವಿ.ಸುನಿಲ್ ಕುಮಾರ್ ಅವರು ಎರಡೂ ಬಸ್ ನಿಲ್ದಾಣಗಳಲ್ಲಿ ಜೆ.ಕೆ.ಟೈರ್ ಸಂಸ್ಥೆಯು ಅಳವಡಿಸಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆ ಕಡ್ಡಾಯವಾಗಿ ಬಳಸಲು ಸೂಕ್ತ ಕ್ರಮಕೈಗೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಹಾಗೂ ಮೈಸೂರು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ