ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತದ ವಿಶ್ವ ನಾಯಕ ಶ್ರೀನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರಿದ ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ರಾಘವೇಂದ್ರ ಯಕ್ಷಿಂತಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೊಡೆಕಲ್ಲಿಗೆ ಭಾರತದ ವಿಶ್ವ ನಾಯಕ ಶ್ರೀ ನರೇಂದ್ರ ಮೋದಿಯವರು ಇಂದು ನಾರಾಯಣಪುರ ಎಡದಂಡೆ ಕಾಲುವೆ ಬಸವಸಾಗರ ಜಲಾಶಯದ ಗೇಟುಗಳನ್ನು ಲೋಕಾರ್ಪಣೆ ಮಾಡಲು ಆಗಮಿಸಿದರು ಹಾಗೂ ಆಧುನೀಕರಣ ಯೋಜನೆಯಡಿಯಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ದೇಶದಲ್ಲಿಯೇ ಪ್ರಪ್ರಥಮ ಎನ್ನಲಾದ ನೂತನ ತಂತ್ರಜ್ಞಾನದ ಮೂಲಕ ನಾಲೆಯ ಗೇಟುಗಳನ್ನು ನಿಯಂತ್ರಣ ಕೊಠಡಿಯಿಂದಲೇ ನಿಯಂತ್ರಿಸುವ ಯೋಜನೆಗೆ ಚಾಲನೆ ನೀಡಿದರು. ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷರು ರಾಘವೇಂದ್ರ ಯಕ್ಷಿಂತಿ ಅವರಿಗೆ ಆತ್ಮೀಯವಾಗಿ ಗೌರವ ಸಲ್ಲಿಸಿದ ವಿಶ್ವ ನಾಯಕ್ ಶ್ರೀನರೇಂದ್ರ ಮೋದಿಜಿ ಅವರ ವ್ಯಕ್ತಿತ್ವ ಬಹಳ ದೊಡ್ಡದು ಸಾಮಾನ್ಯ ಜನರಿಗೂ ಗೌರವ ನೀಡುವ ಮಹಾನ್ ನಾಯಕ ನಮ್ಮ ಪ್ರಧಾನ ಮಂತ್ರಿಗಳು ನಾನು ಬಿಜೆಪಿಯ ಸಾಮಾನ್ಯ ಎಸ್.ಟಿ. ಮೋರ್ಚ ಜಿಲ್ಲಾ ಅಧ್ಯಕ್ಷ ನಮಗೆ ಕೊಟ್ಟ ಗೌರವ ನೋಡಿ ತುಂಬಾನೇ ಸಂತೋಷವಾಗಿದೆ ಎಂದು ರಾಘವೇಂದ್ರ ಯಕ್ಷಿಂತಿ ಅವರು ಸಂತೋಷವನ್ನು ಹಂಚಿಕೊಂಡರು.

ವರದಿ ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ