ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗರ್ಭಿಣಿ ಮಹಿಳೆಯರು ಪೌಷ್ಟಿಕಾಂಶ ಆಹಾರ ಪದಾರ್ಥಗಳನ್ನೇ ಹೆಚ್ಚು ಸೇವಿಸಬೇಕು:ಛತ್ರಪ್ಪ ಶಿಕ್ಷಕರು

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಹಾಗೂ ಪೌಷ್ಟಿಕ ಸಮಿತಿ ಮತ್ತು ಬಾಲವಿಕಾಸ ಸಮಿತಿಗಳ ಜಂಟಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಛತ್ರಪ್ಪ ಶಿಕ್ಷಕರು ಮಾತನಾಡಿ ಗರ್ಭಿಣಿ ಮಹಿಳೆಯರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ಪದಾರ್ಥಗಳನ್ನು ನೀಡಿ ಮಕ್ಕಳ ಬೆಳವಣಿಗೆಗೆ ಪ್ರೋತ್ಸಾಹಿಸಲಾಗುತ್ತಿದೆ. ಕಾಳುಗಳು,ಗೋಧಿ ಪದಾರ್ಥಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಇದರ ಜೊತೆಗೆ ನಾವುಗಳು ಹಸಿ ತರಕಾರಿ ಹಾಗೂ ಸೊಪ್ಪುಗಳನ್ನು, ಮೊಳಕೆ ಹೊಡೆದ ಕಾಳುಗಳನ್ನು ಹೆಚ್ಚು ಹೆಚ್ಚು ಸೇವನೆ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿಯರಾದ ಶಂಕ್ರಮ್ಮ,ರಂಜಾನಬೀ ಹಾಗೂ ಸ.ಹಿ.ಪ್ರಾ.ಶಾಲೆಯ ಶಿಕ್ಷಕರಾದ ದೊಡ್ಡಪ್ಪ ಸ.ಶಿ,ಛತ್ರಪ್ಪ ಸ.ಶಿ. ಕಲ್ಲನಗೌಡ ಸ.ಶಿ, ಆಶಾ ಕಾರ್ಯಕರ್ತೆಯರಾದ ದೇವಮ್ಮ,ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರಾದ ಬಸನಗೌಡ ಮೇಟಿ,ಶಿವರಾಜ ಹೂಗಾರ,ಪಂಪಾಪತಿ ಜೀನೂರು ಹಾಗೂ ಗರ್ಭಿಣಿ ಮಹಿಳೆಯರು ಉಪಸ್ಥಿತರಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ