ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮಸ್ಯೆ ಪರಿಹಾರಕ್ಕೆ ಗ್ರಾಮ ವಾಸ್ತವ್ಯ ಸಹಕಾರಿ ರಾಮಚಂದ್ರ ಗಡದೆ (ಎ.ಸಿ)

ಇಂಡಿ:ಗ್ರಾಮೀಣ ಭಾಗದ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆ ಕಾರ್ಯಕ್ರಮ ಅತ್ಯಂತ ಸಹಕಾರಿಯಾಗಿದೆ ಎಂದು ಕಂದಾಯ ಉಪ ವಿಭಾಗಾಧಿಕಾರಿ ರಾಮಚಂದ್ರ ಗಡದೆ ಹೇಳಿದರು.

ತಾಲೂಕಿನ ಪಡನೂರ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯ ಮೈದಾನದಲ್ಲಿ ನಡೆದ ಅಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಹಶೀಲ್ದಾರ ನಾಗಯ್ಯ ಹಿರೇಮಠ ಮಾತನಾಡಿ ಜನರ ಮನೆ ಬಾಗಲಿಗೆ ಆಡಳಿತವನ್ನು ತರುವ ನಿಟ್ಟಿನಲ್ಲಿ ಗ್ರಾಮ
ವಾಸ್ತವ್ಯ ಪೂರಕವಾಗಿದೆ ಎಂದರು ಗ್ರಾಮಸ್ಥರು ತಮ್ಮ ಸಮಸ್ಯೆಗಳಿಗೆ ಕೇಳಿಕೊಂಡರು ಮತ್ತು ಅರ್ಜಿ ಸಲ್ಲಿಸಿದರು ಕಾರ್ಯಕ್ರಮದಲ್ಲಿ ಭೂ ದಾಖಲೆ ಇಲಾಖೆ I8, ತಾ.ಪಂ 8, ಹೆಸ್ಕಾಂ 05, ಲೋಕೋಪಯೋಗಿ 2, ಕೃಷಿ 05, ಪಶು ಇಲಾಖೆ 02, ಕೆ.ಎಸ್.ಆರ್.ಟಿ.ಸಿ 1. ಜಿ.ಪಂ ಇಂಜಿನಿಯರಿಂಗ 02, ಪೋಲಿಸ್ I, ಆರೋಗ್ಯ 1 ಪಂಚಾಯತ ರಾಜ್ 1, ಸಹಕಾರ 1, ಶಿಕ್ಷಣ 1, ವಿಕಲಚೇತನ 03 ಸೇರಿದಂತೆ ಒಟ್ಟು 68 ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದರು.

17 ಜನರಿಗೆ ಸಂಧ್ಯಾ ಸುರಕ್ಷಾ ಯೋಜನೆಯ ಅಡಿ ಕಾರ್ಡು ವಿತರಿಸಲಾಯಿತು. ಗ್ರಾ.ಪಂ ಅಧ್ಯಕ್ಷೆ ನೇತ್ರಾವತಿ ಗಿರಣಿವಡ್ಡರ, ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಪಂಚಾಯತ ರಾಜದ ಆ‌.ರುದ್ರವಾಡಿ,ಸಣ್ಣ ನೀರಾವರಿಯ ಎಇಇ ಬಸವರಾಜ ಕೆರೂರ,ಸಿಡಿಪಿಓ ಸುಮಂಗಲಾ ಹಿರೇಮನಿ, ಸಮಾಜ ಕಲ್ಯಾಣ ಅಧಿಕಾರಿ ಬಿ.ಜೆ.ಇಂಡಿ ಸೇರಿದಂತೆ ವಿವಿಧ ಇಲಾಖಾ ಶಾಲಾ ಸಿಬ್ಬಂದಿ ಮತ್ತಿತರಿದ್ದರು.

ವರದಿ:ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ