ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೂನಿಯರ್ ಕಾಲೇಜ್ ಮೈದಾನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿ, ಹಾಗೂ ತಾಲೂಕು ಸ್ವೀಪ್ ಸಮಿತಿ ಗಂಗಾವತಿ ಇವರ ಸಹಯೋಗದಲ್ಲಿ ಇಂದು ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ತಾ.ಪಂ ಇಒ ಮಹಾಂತಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಜರುಗಿತು.

ಕಾರ್ಯಕ್ರಮ ಉದ್ದೇಶಿಸಿ ತಾ.ಪಂ ಇಒ ಮಹಾಂತಗೌಡ ಪಾಟೀಲ್ ಮಾತನಾಡಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಐದು ವರ್ಷಕೊಮ್ಮೆ ಸಾರ್ವತ್ರಿಕ ಚುನಾವಣೆಗಳು ಬರುತ್ತಿದ್ದು ನಮಗೆಲ್ಲ ತಿಳಿದಿರುವ ವಿಷಯ. ಮತದಾನ ಮಾಡುವುದು ನಮ್ಮ ಹಕ್ಕು, 1992 ರಿಂದ ಭಾರತದಲ್ಲಿ ಈ ಮತದಾರರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ‌. ಮತದಾನದಿಂದ ಯಾರು ವಂಚಿತರಾಗದೆ ನಮ್ಮ‌ ಅಮೂಲ್ಯವಾದ ಮತದಾನವನ್ನು ಮಾಡಬೇಕು. ಹಾಗೇ ಯುವ ಮತದಾರರು ನಿಮ್ಮ ಮತದಾನದ ಹಕ್ಕನ್ನು ಚಲಾಯಿಸಿ, ಮುಂದಿನ ಯುವಕರಿಗೆ ಸ್ಪೂರ್ತಿ ನೀಡಿ ಎಂದರು ನಂತರ ಕಾಲೇಜ್ ವಿದ್ಯಾರ್ಥಿಗಳಿಗೆ ಮತದಾನದ ಕುರಿತು ಪ್ರತಿಜ್ಞಾ ವಿಧಿ ಭೋದಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜ್ ಪ್ರಾಂಶುಪಾಲರಾದ ಶಾಂತಪ್ಪ ಟಿ.ಸಿ,ಬಸಪ್ಪ ನಾಗೋಲಿ,ತಾ.ಪಂ ಸಾಮಾಜಿಕ ಪರಿಶೋಧನೆ ಸಂಯೋಜಕ ವೀರನಗೌಡ, ಐಇಸಿ ಸಂಯೋಜಕ ಸೋಮನಾಥ ನಾಯಕ,ವಿಷಯ ನಿರ್ವಾಹಕ ಸಂತೋಷ ಸೇರಿ ಕಾಲೇಜಿನ ಉಪನ್ಯಾಸಕರು,ವಿಧ್ಯಾರ್ಥಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ