ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೇಶಿಪ್ ರಸ್ತೆ ಕಾಮಗಾರಿ ಚುರುಕು ಮುಟ್ಟಿಸಲು ಚಾಮರಾಜನಗರ ಜಿಲ್ಲೆಯ ಕೊಂಗರಳ್ಳಿ ಗ್ರಾ.ಪಂ ಕಛೇರಿಗೆ ಶಾಸಕರಾದ ಆರ್ ನರೇಂದ್ರ ಭೇಟಿ

ಹನೂರು:ಕೊಳ್ಳೇಗಾಲ ಹನೂರು ಮುಖ್ಯ ರಸ್ಯೆಯು ಕಾಮಗಾರಿಗೆ ಚುರುಕು ಮುಟ್ಟಿಸಲು ಖುದ್ದು ಶಾಸಕರೆ ಕೊಂಗರಹಳ್ಳಿ ಗ್ರಾಮ ಪಂ. ಕಛೇರಿಗೆ ಬೇಟಿ ನೀಡಿದರು ಹಾಗೂ ಇದೇ ಸಮಯದಲ್ಲಿ ತಾಲ್ಲೂಕು ಉಪ ವಿಭಾಗಾಧಿಕಾರಿ ಗೀತಾ ಹುಡೇದ ಅವರು ಸಹ ಭೇಟಿ ನೀಡಿ ಕೆಶಿಫ್ ರಸ್ತೆ ಅಗಲೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ಮುಖ್ಯ ರಸ್ತೆಯಲ್ಲಿ ತೆರುವಾದ ಮನೆಗಳು ಅಂಗಡಿಗಳ ಪರಿಹಾರಕ್ಕೆ ಫಲಾನುಭವಿಗಳ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಿದರು.
ಭೇಟಿ ನೀಡಿದ ಸಮಯದಲ್ಲಿ ಮಾತನಾಡಿದ ಶಾಸಕರಾದ ಆರ್ ನರೇಂದ್ರ ಅವರು ಕೆಶಿಫ್ ರಸ್ತೆ ಅಗಲೀಕರಣ ಸಂದರ್ಭದಲ್ಲಿ ತೆರುವಾದಂತಹ ಮನೆಗಳು ಅಂಗಡಿಗಳಿಗೆ ಈಗಾಗಲೇ ಪರಿಹಾರವನ್ನು ನೀಡಲಾಗಿದೆ. ಸುಮಾರು 27 ಜನರ ಸೂಕ್ತ ದಾಖಲಾತಿಗಳು ಸರಿಯಿಲ್ಲದೆ ರಿಜೆಕ್ಟ್ ಮಾಡಲಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ನಾನು ಮತ್ತುಗೀತಾ ಹುಡೇದ ಉಪವಿಗಾಧಿಕಾರಿಗಳು ಪಿಡಿಒ ಅವರು ಕೆಶಿಫ್ ರಸ್ತೆ ಅಧಿಕಾರಿಗಳು ಲಭ್ಯವಿರುವ ದಾಖಲಾತಿಗಳನ್ನು ಕಲೆಕ್ಟ್ ಮಾಡಿ ಮತ್ತೊಮ್ಮೆ ಅದನ್ನು ಪರಿಶೀಲನೆ ನಡೆಸಿ ದಾಖಲಾತಿ ಕೊಟ್ಟಿರುವಂತಹವರಿಗೆ ಪರಿಹಾರ ವ್ಯವಸ್ಥೆ ಮಾಡಬೇಕಾಗಿದೆ.

ಜೊತೆಗೆ ಕಳೆದ 20 ವರ್ಷಗಳಿಂದ ಅಲ್ಲೇ ವಾಸ ಇರುವಂತ ಕೆಲವೊಂದಷ್ಟು 9 ಜನರ ದಾಖಲಾತಿಗಳು ಏನು ಇಲ್ಲದೆ ಇರುವುದು ಕಂಡುಬಂದಿದೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡಿ ಅವರಿಗೂ ಸಹ ಪರಿಹಾರ ಸಿಗುವಂತೆ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಶಾಸಕರು ಕೊಂಗರಹಳ್ಳಿ ಕಾಮಗೆರೆ ಗ್ರಾಮದ ಮುಖ್ಯ ರಸ್ತೆ ಅಗಲೀಕರದಲ್ಲಿ ತೆರವಾದ ಮನೆಗಳು ಅಂಗಡಿಗಳ ಮಾಲೀಕರ ಪರಿಹಾರಕ್ಕೆ ಸಂಬಂಧಿಸಿದಂತೆ ಅರ್ಜಿಗಳ ಮೂಲ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಾಲೂಕು ಉಪ ವಿಭಾಗಾಧಿಕಾರಿ ಗೀತಾ ಹುಡೇದ, ಗ್ರಾಮ ಪಂಚಾಯಿತಿ ಪಿಡಿಒ ಮಹೇಂದ್ರ ಹಾಗೂ ಕೆಶಿಫ್ ರಸ್ತೆ ಅಧಿಕಾರಿಗಳು, ಗೌಡ್ರು ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಗೋಪಾಲ್, ಮಹೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ