ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ನರೇಂದ್ರ ರಾಜೂಗೌಡ ಅವರಿಂದ ಪಶು ಆಸ್ಪತ್ರೆ ಕಟ್ಟಡ ಉದ್ಘಾಟನೆ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದಲ್ಲಿ 36 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪಶು ಆಸ್ಪತ್ರೆ ಕಟ್ಟಡವನ್ನು ಹನೂರು ಶಾಸಕರಾದ ನರೇಂದ್ರ ರವರು ಉದ್ಘಾಟನೆ ನೆರವೇರಿಸಿದರು.

ಪಶು ಆಸ್ಪತ್ರೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು ಈ ಭಾಗದಲ್ಲಿ ಕೃಷಿ ಅವಲಂಬಿತ ಮತ್ತು ಭೂರಹಿತರಿಗೆ ಹೆಚ್ಚಾಗಿ ಪಶು ಪಾಲನೆ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಜಾನುವಾರುಗಳ ಸುರಕ್ಷತೆಗೆ ಅನುಕೂಲವಾಗುವ ಉದ್ದೇಶದಿಂದ 1963 ರಲ್ಲಿ ದಿ. ಜಿ.ವಿ. ಗೌಡ ರವರು ಈ ಗ್ರಾಮದಲ್ಲಿ ಪಶು ಆಸ್ಪತ್ರೆ ಯನ್ನು ನಿರ್ಮಿಸಿದ್ದರು.

ಕಟ್ಟಡ ತುಂಬಾ ದುರಸ್ತಿಯಾಗಿದ್ದ ಕಾರಣ 36 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ. ಈ ಭಾಗದ ನಾಟಿ ತಳಿ ಹಸುಗಳ ರಕ್ಷಿಸಿ ತಳಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಎಲ್ಲಾ ರೈತಾಪಿ ವರ್ಗದ ಜನರು ಮತ್ತು ಜಾನುವಾರುಗಳಿಗೆ ಅನುಕೂಲವಾಗಲಿ ಎಂದು ತಿಳಿಸಿದರು. ಈ

ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಕೌದಲ್ಲಿ ಗ್ರಾ.ಪಂ. ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷೆ ಶಾಂತಿ, ಪಶು ವೈದ್ಯಾಧಿಕಾರಿ ಸಿದ್ದರಾಜು, ಮುಖಂಡರಾದ ಮೆಹಬೂಬ್ ಶರೀಫ, ಗಿರೀಶ್ ಕುಮಾರ್, ಸುದೇಶ್, ಹರೀಶ್, ಪಾಳ್ಯ ಕೃಷ್ಣ, ಸಿದ್ದರಾಜು, ಚಾಂದ್ ಪಾಷಾ, ಶಿವಕುಮಾರ್ ಮುಂತಾದವರು ಹಾಜರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ