ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮುದಾಯ ಭವನಗಳನ್ನು ಸದುಪಯೋಗ ಪಡಿಸಿಕೊಳ್ಳಿ, ಶಾಸಕರಾದ ಆರ್. ನರೇಂದ್ರ ಸಲಹೆ

ಹನೂರು:ನನ್ನ ಕ್ಷೇತ್ರದಲ್ಲಿ ಈಗಾಗಲೇ ಸರ್ವಜನಾಂಗಕ್ಕೂ ಉಪಯೋಗವಾಗುವಂತೆ ಸಭೆ ಸಮಾರಂಭಗಳಲ್ಲಿ ಬಳಸಿಕೊಳ್ಳಲು ಉಪಯೊಇಗವಾಗುವಂತೆ ಸಹಕಾರಿಯಾಗಲು ಸಮುದಾಯ ಭವನಗಳನ್ನು ನಿರ್ಮಿತಿ ಕೇಂದ್ರದ ಸಹಕಾರದೊಂದಿಗೆ ನಿರ್ಮಿಸಲಾಗಿದೆ ಹಿಂದಿನ ಕಾಲದಲ್ಲಿ ಚಾವಡಿಗಳನ್ನ ಉಪಯೋಗಿಸುತ್ತಿದ್ದರು ಈಗ ಅಂತಹ ಸಮಸ್ಯೆ ನಮಲ್ಲಿಲ್ಲ,ಇನ್ನೂ ಹಲವು ಭವನಗಳ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾಗುವುದು ಎಂದು ಶಾಸಕರಾದ ಆರ್. ನರೇಂದ್ರ ತಿಳಿಸಿದರು.
ಹನೂರು ಕ್ಷೇತ್ರದ ಎಲ್ಲೆಮಾಳ ಗ್ರಾಮ ಪಂಚಾಯತಿಯ ಬೂದುಗುಪ್ಪೆ ಗ್ರಾಮದಲ್ಲಿ ಹನ್ನೆರಡು ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ್ದ ಸಮುದಾಯ ಭವನವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿದ ಅವರು ಈಗಾಗಲೇ ಬಾಬು ಜಗಜೀವನ್ ರಾಮ್ ಸಮುದಾಯ ಭವನಗಳನ್ನು ನಿರ್ಮಿಸಿ ಉದ್ಘಾಟನೆ ಮಾಡಿದ್ದೇನೆ,ಹಾಗಾಗಿ
ನೀವೆಲ್ಲರೂ ಹಿಂದಿನಿಂದಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದೀರ ಮುಂದಿನ ದಿನಗಳಲ್ಲಿ ಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೆಲ್ಲರು ನಮ್ಮ ಪಕ್ಷವನ್ನು ಬೆಂಬಲಿಸಬೇಕು, ನಾನು ನಿಮ್ಮಜೋತೆಯಲ್ಲಿದ್ದಿನಿ ಮುಂದೆಯೂ ಇರುತ್ತೇನೆ ಹಾಗೂ ಸಮುದಾಯ ಭವನಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಉಪಯೋಗಿಸುವ ಕಾರ್ಯವಾಗಬೇಕು ಮತ್ತು ದಿನ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡರೆ ಬಹಳ ಪ್ರಯೋಜನಕಾರಿಯಾಗಲಿದೆ ಎಂದು ತಿಳಿಸಿದರು . ಇದೇ ಸಂದರ್ಭದಲ್ಲಿ ರಾಜ್ಯ ಯುವ ಕಾರ್ಯದರ್ಶಿ ಚೇತನ್ ದೊರೈರಾಜು ,ಎಲ್ಲೆಮಾಳ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ಜಯಲಕ್ಷ್ಮಿ ,ಸದಸ್ಯರುಗಳಾದ ಗೋವಿಂದು,ಜಕವುಲ್ಲಖಾನ್ ,ಮಂಜುಳ, ಮುಖಂಡರಾದ ನಟರಾಜು,ನಾಗೇಶ್ ,ನಿರ್ಮಿತಿಕೇದ್ರ ಅಧಿಕಾರಿಗಳಾದ ರವಿಕುಮಾರ್ ,ಶೆಟ್ರು ,ಗ್ರಾಪ ಪಿ ಡಿ ಒ ಮಂಜುನಾಥ್ ಪ್ರಸಾದ್ , ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ