ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ

ಹಾನಗಲ: ಕೊಪ್ಪರಸಿಕೊಪ್ಪ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ ಜರುಗಿತು. ಮುಖ್ಯ ವೈದ್ಯಾಧಿಕಾರಿಗಳಾದ ಶ್ರೀ ಜಿ ಆರ್, ಸರ್ವೆ ಅವರು ಕುಷ್ಟರೋಗದ ಪ್ರಾರಂಭಿಕ ಲಕ್ಷಣಗಳು, ಕುಷ್ಟರೋಗ ಹರಡುವಿಕೆ, ಕುಷ್ಟರೋಗದಿಂದ ಆಗುವ ದುಷ್ಪರಿಣಾಮಗಳು, ಕುಷ್ಟರೋಗವನ್ನು ಹೇಗೆ ತಡೆಗಟ್ಟಬಹುದು, ಎಂಬುವುದನ್ನು ಕುರಿತು ಸರಳವಾಗಿ ಸಭೆಯಲ್ಲಿ ಸೇರಿದ ರೋಗಿಗಳು ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸರ್ಕಾರಿ ಯುನಾನಿ ಚಿಕಿತ್ಸಾಲಯದ ವೈದ್ಯಾಧಿಕಾರಿಗಳಾದ ಶ್ರೀ ಮೈನುದ್ದೀನ್ ಲೋಹಾರ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರಾಮಚಂದ್ರ ಓಲೆಕಾರ. ಹೆಲ್ತ್ ಇನ್ಸ್ಪೆಕ್ಟರ ಶ್ರೀ ನವೀನ ಕುಮಾರ ಕಾರ್ಯಕ್ರಮವನ್ನು ಪ್ರಾರಂಭಿಸಿ ಕೊನೆ ಕ್ಷಣದಲ್ಲಿ ವಂದನಾರ್ಪಣೆಯ ಮೂಲಕ ಮುಗಿಸಿದರು. ಅಟೆಂಡರಾದ ಶ್ರೀ ಮಹೇಶ ಕಮ್ಮಾರ ಮತ್ತು ಕೊಪ್ಪರಸಿಕೊಪ್ಪ ಹೊಡೆ, ಗಾಜಿಪುರ, ಓಣಿಕೆರಿ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿಗಾರರು.ರವಿ ಓಲೇಕಾರ. ಕೊಪ್ಪರಸಿಕೊಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ