ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಂ. ಆರ್ ಮಂಜುನಾಥ್ ನೇತೃತ್ವದಲ್ಲಿ ಜೆ.ಡಿ.ಎಸ್ ಪಕ್ಷಕ್ಕೆ ಸೇರ್ಪಡೆ

ಚಾಮರಾಜನಗರ ಜಿಲ್ಲೆಯ ಕಾಮಗೆರೆ ಗ್ರಾಮದ ಆದಿ ಜಾಂಬವ ಸಮಾಜದ ಯುವಕರು ಎಂ. ಆರ್ ಮಂಜುನಾಥ್ ನೇತೃತ್ವದಲ್ಲಿ ಜೆ.ಡಿ.ಎಸ್ ಪಕ್ಷಕ್ಕೆ ಸೇರ್ಪಡೆ.

ಹನೂರು:ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಎಂ .ಆರ್ ಮಂಜುನಾಥ್ ಸಮ್ಮುಖದಲ್ಲಿ ಕಾಮಗೆರೆ ಗ್ರಾಮದ ಆದಿ ಜಾಂಬವ ಸಮಾಜದ ಯುವಕರು ಹಾಗೂ ತೆಳ್ಳನೂರು ಗ್ರಾಮದ ಮಡಿವಾಳ ಸಮಾಜದ ಯುವಕರು ಜೆಡಿಎಸ್ ಪಕ್ಷ ಸೇರ್ಪಡೆಯಾದರು.
ಎಂ ಆರ್ ಮಂಜುನಾಥ್ ರವರು ಮಾತನಾಡಿ ನಿಮ್ಮ ಗ್ರಾಮದ ಕುಂದು ಕೊರತೆಗಳನ್ನು ನಮ್ಮ ಬಳಿ ತಿಳಿಸಿ ಸಮಸ್ಯೆಯನ್ನು ಬಗೆಹರಿಸಿ ಕೊಡುತ್ತೇನೆ. ನಿಮ್ಮ ಸಮಾಜದ ಎಲ್ಲಾ ಯುವಕರು ಒಟ್ಟುಗೂಡಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು ದಿನಾಂಕ 11.2.23ರಂದು ಬೂತ್ ಮಟ್ಟದ ಯುವಕರ ಸಭೆಯನ್ನು ಕರೆದಿದ್ದು ತಾವೆಲ್ಲರೂ ಭಾಗವಹಿಸಬೇಕು ಎಂದು ತಿಳಿಸಿದರು.
ಬಾಬು ಜಗಜೀವನ್ ರಾವ್ ಸಂಘದ ಅಧ್ಯಕ್ಷ ಕುಮಾರ್ ಮಾತನಾಡಿ ಎಂ ಆರ್ ಮಂಜುನಾಥ್ ರವರ ಕಾರ್ಯವೈಖರಿಯನ್ನು ಮೆಚ್ಚಿ ಕುಮಾರಸ್ವಾಮಿ ಅವರನ್ನು ಅಧಿಕಾರಕ್ಕೆ ತರಬೇಕೆಂದು ನಾವು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವೆ.
ನಮ್ಮ ಸಮಾಜದ ಬೀದಿಯಲ್ಲಿ ಸರಿಯಾದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲ ಇದನ್ನು ಸರಿಪಡಿಸಿ ಕೊಡಬೇಕೆಂದು ಹಾಗೂ ಅನೇಕ ಸಮಸ್ಯೆಗಳನ್ನು ಪರಿಹರಿಸಿಕೊಡಬೇಕು ಎಂದು ಎಂಆರ್ ಮಂಜುನಾಥ್ ರಲ್ಲಿ ವಿನಂತಿಸಿದರು.
ಆದಿ ಜಾಂಬವ ಸಮಾಜದ ಯುವಕರಾದ ಅನಿಲ್, ಬಸವರಾಜು, ಷಣ್ಮುಖ, ನಿಂಗರಾಜು, ಸತೀಶ್, ಸೋನು, ಸೋಮು, ಶಂಕರ್, ನಿಂಗರಾಜು, ವಿನೋದ್, ರಾಜು ರಾಜಣ್ಣ ಹಾಗೂ ಮಡಿವಾಳ ಸಮಾಜದ ಸಿದ್ದು, ಸಿದ್ದರಾಜು, ಕಿರಣ್ ,ಶಶಿ, ಶಿವು, ಇನ್ನು ಮುಂತಾದವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ