ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶರಣಬಸಪ್ಪಗೌಡ ದರ್ಶನಾಪೂರ ನೇತೃತ್ವದಲ್ಲಿ ಪ್ರಜಾದ್ವನಿ ಯಾತ್ರೆ

ಯಾದಗಿರಿ:ನಿನ್ನೆ ನಡೆದ ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿದರು.
ಬಿಜೆಪಿ ನಾಯಕರನ್ನು ನೊಡಿದರೆ ಕನಿಕರ ಬರುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಶಹಾಪುರ:- ಪ್ರಿಯಾಂಕ್ ಖರ್ಗೆ ರಾಜ್ಯದಲ್ಲಿ ಅಧಿಕಾರ ಇರುವ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಹಾಗೂ ಬಿಜೆಪಿ ಎಲ್ಲಾ ಸಚಿವರಿಗೂ ತಮ್ಮ ಮೇಲೆ ನಂಬಿಕೆ, ಭರವಸೆ ಇಲ್ಲದೇ ಹತಾಶಾರಾಗಿ ಅವರೇ ಸೊಲು ಒಪ್ಪಿಕೊಳ್ಳುತ್ತಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಶಹಾಪುರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮದಲ್ಲಿ. ಮಾತನಾಡಿದ ಕಾಂಗ್ರೆಸ್ ಪಕ್ಷವು ಭಾವನಾತ್ಮಕವಾಗಿ ರಾಜಕೀಯ ಮಾಡುತ್ತದೆ. ನಾವು ಸಂವಿಧಾನ ಅಡಿಯಲ್ಲಿ ಕೆಲಸ ಮಾಡಿದರೆ. ಬಿಜೆಪಿ ಪಕ್ಷದವರು ಸಂವಿಧಾನ ದೂರ ಇಟ್ಟು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ.
ಈ ಸಭೆಗೆ ಮುಖ್ಯ ಅತಿಥಿಯಾಗಿ ಮಾಜಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಈ ಪ್ರಜಾದ್ವನಿ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದರು. ಹಾಗೇ ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದರು. ರಾಜ್ಯದ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ ಎಂದು ಹೇಳಿದರು.
ಪ್ರಜಾದ್ವನಿ ಯಾತ್ರೆಯ ಸಮಿತಿ ಅಧ್ಯಕ್ಷರಾದ ಎಂ.ಬಿ. ಪಾಟೀಲ್ ರವರು ಮಾತನಾಡಿ ರಾಜ್ಯದಲ್ಲಿ ಅಧಿಕಾರಿದಲ್ಲಿರುವ ಬಿಜೆಪಿ ಸರ್ಕಾರವು ಯಾವುದೇ ಅಭಿವೃದ್ದಿ ಮಾಡದೇ ಬರೀ ಬ್ರಷ್ಟಾಚಾರದಲ್ಲಿ ತೊಡಗಿದೆ. ಅಲ್ಲದೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಬಿಜೆಪಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಎಂ.ಬಿ.ಪಾಟೀಲ ಹೇಳಿದರು.
ಈ ಸಮಾರಂಭದಲ್ಲಿ ಭಾಗವಹಿಸಿದ ಕೆಪಿಸಿಸಿ ಮಾಜಿ ಶಾಸಕ ಜಮೀರ ಅಹ್ಮದ ಖಾನ್, ರೇವು ನಾಯಕ ಬೆಳಮಗಿ, ಎಂ.ವೈ ಪಾಟೀಲ್, ಈ ಸಮಾವೇಶದ ಕೇಂದ್ರ ಬಿಂದು ಆದ ಶರಣಬಸಪ್ಪಗೌಡ ದರ್ಶನಾಪೂರ, ಎಲ್ಲಾ ಗೌರವಾನ್ವಿತ, ಜಿಲ್ಲಾಧ್ಯಕ್ಷರು, ತಾಲೂಕ ಅಧ್ಯಕ್ಷರುಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು, ಶಹಾಪುರ ನಗರಸಭೆ ಹೌಸಿಂಗ್ ಬೋರ್ಡ್ ಅಧ್ಯಕ್ಷರಾದ ವಸಂತ ಸುರಪುರಕರ್, ಹಾಗೂ ಗ್ರಾಮಸ್ಥರು ಸೇರಿದಂತೆ ಅನೇಕರು ಪ್ರಜಾದ್ವನಿ ಯಾತ್ರೆಯಲ್ಲಿ ಭಾಗವಹಿಸಿದ್ದರು.

ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ