ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ


ಅಥಣಿ ತಾಲ್ಲೂಕಿನ ಗಡಿಭಾಗದ ಗುರುಕುಲ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀ ಸದ್ಗುರು ರಾಯಲಿಂಗೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಅತಿ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ ಅಭಿನವ ಗುರುಲಿಂಗಜಂಗಮ ಮಹಾಸ್ವಾಮಿಜಿ ಶ್ರೀ ರಾಯಲಿಂಗೇಶ್ವರ ಸಂಸ್ಥಾನ ಮಠ ಕಕಮರಿ ಇವರು ಮಾತನಾಡಿ “ವಿದ್ಯೆ ಕಲಿತ ವ್ಯಕ್ತಿ ಭ್ರಷ್ಟನಾಗಬಹುದು ಆದರೆ ಸಂಸ್ಕಾರ ಕಲಿತ ವ್ಯಕ್ತಿ ಭ್ರಷ್ಟನಾಗಲಾರ” ಅಂತಹ ಸಂಸ್ಕಾರಯುತ ಶಿಕ್ಷಣ ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ಸ್ಥಾನ ಪಡೆಯುವ ಮೂಲಕ ಜನ್ಮ ನೀಡಿದ ತಂದೆ ತಾಯಿಗಳಿಗೆ, ವಿಧ್ಯೆ ನೀಡಿದ ಗುರುಗಳಿಗೆ ಹಾಗೂ ಸಂಸ್ಥೆಗೆ ಒಳ್ಳೆಯ ಹೆಸರು ತರವಂತವರಾಗಲಿ ಎಂದು ಆಶೀರ್ವದಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಪದವಿಪೂರ್ವ ಕಾಲೇಜು ತುಂಗಳದ ಶಿಕ್ಷಣಶಾಸ್ತ್ರ ಉಪನ್ಯಾಸಕರಾದ ಶ್ರೀ ಎಚ್ ಎ ಮಗದುಮ್ ಮಾತನಾಡಿ ಸಾಧನೆ ಮಾಡಲು ಅಂಗಾಗ ವೈಫಲ್ಯಗಳು ಹಾಗೂ ನಮ್ಮ ಆಲಸ್ಯಗಳಿಂದ ಬೇಲಿಯಾಗಬಾರದು. ನಿಜವಾದ ಸಾಧನೆ ಎಂದರೆ ನಾವು ಮಾಡಿದ ಕಾಯಕ ಆತ್ಮ ತೃಪ್ತಿ ನೀಡಿದರೆ ಅದುವೇ ಸಾಧನೆ ಎಂದು ಪ್ರೇರಣಾದಾಯಕ ಮಾತುಗಳನ್ನಾಡಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಪದವಿಪೂರ್ವ ಕಾಲೇಜು ಜಿಲ್ಲಾ ಮಟ್ಟದಲ್ಲಿ ಸಾಧನೆಗೈಯಲು ಕಾರಣರಾದ ಎಲ್ಲಾ ಉಪನ್ಯಾಸಕರಿಗೆ ಸಂಸ್ಥೆಯ ಶ್ರೀಗಳು ಸನ್ಮಾನಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀ ಜಿ ಆರ್ ಬಸರಗಿ, ಅತಿಥಿಗಳಾಗಿ ಆಗಮಿಸಿದ್ದ ಕಕಮರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀ ಹಣಮಂತ ಕಾಂಬಳೆ, ಪದವಿ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಶಿವಗುರು ಬಸರಗಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಗಮೇಶ ಬಸರಗಿ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಹಾಜರಿದ್ಧರು. ಕಾರ್ಯಕಮವನ್ನು ಕುಮಾರಿ ಸಾವಿತ್ರಿ ಮೈಗೂರ, ಭಾಗ್ಯಶ್ರೀ ತೇಲಿ ನಿರೂಪಿಸಿ, ಕುಮಾರಿ ಪ್ರಿಯಾಂಕ ಬಾಳಿಕಾಯಿ ವಂದಿಸಿದರು.

ವರದಿ: ವಿಶ್ವನಾಥ ಹರೋಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ