ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂಡಗೋಡ ಪಟ್ಟಣ ಪಂಚಾಯ್ತಿ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ!

ಸರ್ಕಾರದ ಕೆಲಸ ದೇವರ ಕೆಲಸ ಅನ್ನೋ ಮಾತು ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿಷಯದಲ್ಲಿ ಮಾತ್ರ ಅನ್ವಯ ವಾಗದು.

ಏಕೆಂದರೆ ಮುಂಡಗೋಡದ ಗಾಂಧಿನಗರದಲ್ಲಿ ಅಲ್ಲಿನ ನಿವಾಸಿಗಳು ಕಳೆದ 45 ವರ್ಷಗಳಿಂದ ವಾಸಿಸುತ್ತಿದ್ದಾರೆ, ಪಟ್ಟಣ ಪಂಚಾಯ್ತಿಯಲ್ಲಿ ಮನೆ ತೆರಿಗೆ ಪಾವತಿ ಮಾಡಿ ನಮೂನೆ-3 ಕ್ಕೆ ಅರ್ಜಿಯನ್ನು ಸಲ್ಲಿಸಿರುತ್ತಾರೆ ನಿಯಮಗಳ ಪ್ರಕಾರ ಕೆಲ ದಿನಗಳಲ್ಲಿ ನಮೂನೆ -3 ನೀಡಬೇಕಾಗುತ್ತದೆ ಆದರೆ ಸರ್ಕಾರದ ನೌಕರರಾಗಿ ಸರ್ಕಾರದ ನಿಯಮಾನುಸಾರ ಕೆಲಸ ಮಾಡಲು ಅಸಡ್ಡೆ ತೋರುತ್ತಿರುವ ಪಟ್ಟಣ ಪಂಚಾಯ್ತಿ ಮುಂಡಗೋಡದ ಮುಖ್ಯಾಧಿಕಾರಿ ಹಾಗೂ ಅವರ ಸಿಬ್ಬಂದಿ ವರ್ಗದವರ ವರ್ತನೆ ಬಗ್ಗೆ ರೋಸಿಹೋಗಿ, ಸುಮಾರು 100 ಕ್ಕೂ ಹೆಚ್ಚು ಜನ ಗಾಂಧಿನಗರದ ನಿವಾಸಿಗಳು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಸರ್ಕಾರದ ಮೂಲಗಳಿಗೆ ಮನವಿಪತ್ರವನ್ನು ರವಾನಿಸಿದ್ದಾರೆ.

ಪಟ್ಟಣ ಪಂಚಾಯಿತಿ ಮುಂಡಗೋಡದ ಕೆಲ ಸಿಬ್ಬಂದಿಗಳು ಹಣ ನೀಡಿದರೆ ಮಾತ್ರ ಕೆಲಸ ಮಾಡುತ್ತಾರೆ ಅನ್ನೋ ಆರೋಪವನ್ನು ಪ್ರತಿಭಟನೆಯಲ್ಲಿ ಪಾಲ್ಗೊಂಡ ಕೆಲ ಗಾಂಧಿನಗರದ ನಿವಾಸಿಗಳು ಮಾಡಿದ್ದಾರೆ.ಇಷ್ಟೆಲ್ಲಾ ಆರೋಪಗಳು ಪಟ್ಟಣ ಪಂಚಾಯ್ತಿಯ ನೌಕರರ ಮೇಲಿದ್ದರೂ ಹಾಗೂ ಅನೇಕ ವರ್ಷಗಳಿಂದ ಮುಂಡಗೋಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಇವರನ್ನು ಬೇರೆಡೆ ವರ್ಗಾವಣೆ ಮಾಡುವಂತೆ ಸರ್ಕಾರದ ಮಟ್ಟದಲ್ಲಿ ಜನ ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದರು, ಕೆಲ ರಾಜಕೀಯ ನಾಯಕರ ಕೃಪಾ ಕಟಾಕ್ಷ ದಿಂದ ನೌಕರರು ರಾಜರಾಗಿ,ಅಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತಾ ಇದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ