ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿಖಿಲ್ ಕುಮಾರ್ ಸ್ವಾಮಿ ನಾಳೆ ಮಹದೇಶ್ವರ ಬೆಟ್ಟಕ್ಕೆ ಪಾದ ಯಾತ್ರೆ.ಜೆ.ಡಿ.ಎಸ್ ಕಾರ್ಯಕರ್ತರು ಹಾಗೂ ಮುಖಂಡರು ಸ್ವಾಗತ ಕೋರಿ ಎಂದು ಮನವಿ ಎಂ.ಆರ್.ಮಂಜುನಾಥ್

ಹನೂರು:ಪ್ರತಿ ವರ್ಷದಂತೆ ಈ ವರ್ಷವು ಸಹ ಶ್ರೀ ಮಾದಪ್ಪನ ದರ್ಶನ ಮಾಡಲು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ಹಾಗೂ ಚಲನಚಿತ್ರ ನಟ ನಿಖಿಲ್ ಕುಮಾರಸ್ವಾಮಿರವರು ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಆಗಮಿಸುವರು ಎಂದು ರಾಜ್ಯ ಜೆ ಡಿ ಎಸ್ ಉಪಾಧ್ಯಕ್ಷರಾದ ಎಮ್ ಆರ್ ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಜೆ ಡಿ ಎಸ್ ಕಛೇರಿಯಲ್ಲಿ ಮಾತನಾಡಿದ ಅವರು ನಮ್ಮ ಯುವ ನಾಯಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿರುವ ಹಿನ್ನೆಲೆಯಲ್ಲಿ ನಾಳೆ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ ಅದ್ದರಿಂದ ತಾಲೂಕಿನ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಸ್ವಾಗತಿಸಬೇಕು ಹಾಗೂ ಎಲ್ಲಾರು ಅವರ ಜೊತೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು.ತಾಳಪಟ್ಟಿನಿಂದ ಮಾದೇಶ್ವರ ಬೆಟ್ಟದ ವರೆಗೆ ಪಾದಯಾತ್ರೆ ಕೈಗೊಂಡಿರುವ ಸಮಯದಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಎಡೆಮಾಡಿಕೊಡಬಾರದು ಅದೇ ರೀತಿ ಈ ವರ್ಷ ಪಾದಯಾತ್ರೆ ಕೈಗೊಂಡಿರುವುದು ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರಲ್ಲಿ ಉಮ್ಮಸು ಮತ್ತು ಉತ್ಸಾಹ ಮೂಡಿಸುವಂತೆ ಆಗಿದೆ ಅಲ್ಲದೆ ಇಂದು
ಮಧ್ಯಾಹ್ನ 12 ಗಂಟೆಗೆ ಜಿಲ್ಲೆಯ ಗಡಿ ಭಾಗವಾದ ಸತ್ತಿಗಾಲ ಹ್ಯಾಂಡ್ ಪೋಸ್ಟ್ ಗೆ ಆಗಮಿಸುವ ನಿಖಿಲ್ ರವರನ್ನು ಯುವಕರು ಹಾಗೂ ಕಾರ್ಯಕರ್ತರೊಂದಿಗೆ ಬೈಕ್ ರ್ಯಾಲಿ ಮೂಲಕ ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿ ಪಟ್ಟಣದಲ್ಲಿರುವ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಪುಷ್ಪ ಮಾಲಿಕೆ ಅರ್ಪಿಸಿ ನಂತರ ಕೊಳ್ಳೇಗಾಲದಲ್ಲಿ ನೂತನವಾಗಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡಲಿದ್ದಾರೆ.
ನಂತರ ಮದುವನಹಳ್ಳಿ, ದೊಡ್ಡಿಂದವಾಡಿ, ಕಾಮಗೆರೆ, ಮಂಗಲ ಮೂಲಕ ಹನೂರು ಪಟ್ಟಣ ತಲುಪಲಿದ್ದಾರೆ. ಹನೂರು ಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ನಂತರ ತಾಳುಬೆಟ್ಟಕ್ಕೆ ತೆರಳಲಿದ್ದಾರೆ.ತಾಳ್ಬೆಟ್ಟನಿಂದ ಪಾದಯಾತ್ರೆ ಮೂಲಕ ಮಹದೇಶ್ವರ ಬೆಟ್ಟ ತಲುಪಿ ಮಾದಪ್ಪನ ದರ್ಶನ ಪಡೆದು ಮರಳಿ ಬೆಂಗಳೂರಿನತ್ತ ಹೊರಡಲಿದ್ದಾರೆ ಎಂದು ಪತ್ರಕರ್ತರಿಗೆ ಮಾಹಿತಿ ನೀಡಿದರು .
ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ