ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಚಿವ ವಿ. ಸೋಮಣ್ಣ ಹೋಗುತಿದ್ದ ವಾಹನ ತಡೆದು ಪ್ರತಿಭಟಿಸಿದ ಕಾಮಗೆರೆಯ ಕೆಲ ಗ್ರಾಮಸ್ಥರು

ಹನೂರು ತಾಲೂಕಿನ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ ಹಬ್ಬದ ಪ್ರಯುಕ್ತ ಸಚಿವ ವಿ.ಸೋಮಣ್ಣ ಹೋಗುತಿದ್ದ ಸಂಧರ್ಭ ವಾಹನ ತಡೆದು ಪ್ರತಿಭಟಿಸಿದ ಕಾಮಗೆರೆಯ ಕೆಲ ಗ್ರಾಮಸ್ಥರು.

ಹನೂರು :ರಸ್ತೆ ಕಾಮಗಾರಿ ಪ್ರಾರಂಭವಾಗಿ ಸುಮಾರು ಎರಡು ಮೂರು ವರ್ಷ ಕಳೆದರು ಅಗಲಿಕರಣ ಸಮಯದಲ್ಲಿ ತಮ್ಮ ಸ್ವಂತ ಜಾಗವನ್ನು ಕಳೆದುಕೊಂಡವರಿಗೆ ಸರ್ಕಾರದಿಂದ ಸಿಗಬೇಕಾದ ಅನುದಾನವನ್ನು ಅಧಿಕಾರಿಗಳು ಸರಿಯಾಗಿ ನೀಡದೆ ಕಾಲಹರಣ ಮಾಡುತ್ತಿದ್ದಾರೆ ಎಂದು
ವಸತಿ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಣ್ಣ ರ ವಾಹನವನ್ನು ತಡೆದು ಪ್ರತಿಭಟನೆ ಮಾಡಿದ ಪ್ರಸಂಗ ಜರುಗಿದೆ. ಶಿವರಾತ್ರಿ ಜಾತ್ರೆ ಹಿನ್ನಲೆಯಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತಿದ್ದ ಸಮಯದಲ್ಲಿ ಕಾಮಗೆರೆ ಸಮೀಪದಲ್ಲಿ ಸಚಿವರ ಕಾರು ತಡೆದ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡ ಸಂದರ್ಭ ಎದುರಾಗಿದೆ , ನಂತರ ಮಾತನಾಡಿದ ಸ್ಥಳೀಯರು ಕೊಳ್ಳೇಗಾಲ ಮತ್ತು ಹನೂರಿನವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಸಲಾಗುತ್ತಿರುವ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿದ್ದು ಇಲ್ಲಿಯ ಜನರಲ್ಲಿ ಕೆಲವರು ಬಾಡಿಗೆದಾರಾಗಿದ್ದು ಸರ್ಕಾರದಿಂದ ಬರಬೇಕಿದ್ದ ಪರಿಹಾರದ ಹಣ ವಿಳಂಬ ಆಗುತ್ತಿರುವ ಹಿನ್ನೆಲೆ ಹಲವು ಬಾರಿ ಸ್ಥಳೀಯ ಶಾಸಕರು ಹಾಗೂ ನಿಮ್ಮ ಗಮನಕ್ಕೂ ತಂದರು ಸಹ ಯಾವುದೇ ಪ್ರಾಯೋಜನವಾಗಿಲ್ಲ ಎಂದು ಸಚಿವರಿಗೆ ಗ್ರಾಮಸ್ಥರು ತಿಳಿಸಿದರು. ನಂತರ ಮಾತನಾಡಿದ ಸಚಿವರು ಜೊತೆಯಲ್ಲಿದ್ದ ಸಚಿವರು ಕೊಳ್ಳೇಗಾಲ ಉಪವಿಭಾಗ ಅಧಿಕಾರಿ ಗೀತಾ ಹುಡೇದ್ ರವರಿಗೆ ಈ ವಿಚಾರವಾಗಿ ಸಂಭಂದಿಸಿದ ಎಲ್ಲಾ ಗ್ರಾಮಸ್ತರಿಗೂ ಕೂಡಲೆ ಸ್ಪಂದಿಸುವಂತೆ ಹಾಗೂ ಪರಿಹಾರದ ಹಣ ಮಂಜೂರು ಮಾಡುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯರು ಹಾಜರಿದ್ದರು .
ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ