ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿಂಧನೂರು ಹಸಿರುಕರಣದ ಕೀರ್ತಿ ವನಸಿರಿ ಫೌಂಡೇಶನ್ ಗೆ ಸಲ್ಲುತ್ತದೆ:ಶಂಕರಗೌಡ ದೇವರಮನಿ

ಇಂದು ತುರವಿಹಾಳ ಪಟ್ಟಣದಲ್ಲಿ ಮೌನೇಶ ಬಡಿಗೇರ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ಸದಸ್ಯರು ಭಾಗವಹಿಸಿ ಉಡುಗೊರೆಯಾಗಿ ಸಸಿ ನೀಡಿ ಶುಭಕೋರಿದರು.

ಈ ಸಂದರ್ಭದಲ್ಲಿ ಶಂಕರಗೌಡ ದೇವರಮನಿ ಮಾತನಾಡಿ ಸಿಂಧನೂರು ತಾಲೂಕಿನಾದ್ಯಾಂತ ಇಂದು ಹಸಿರಿನ ವಾತಾವರಣ ನಿರ್ಮಾಣ ಹಾಗೂ ರಸ್ತೆ ಬದಿಯ ಅಕ್ಕಪಕ್ಕದ ಸಸಿಗಳನ್ನು ಉಳುಸಿ ಬೆಳಸಿದ ಕೀರ್ತಿ ವನಸಿರಿ ಫೌಂಡೇಶನ್ ಸಂಸ್ಥೆಗೆ ಹಾಗೂ ಇದರ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರಿಗೆ ಸಲ್ಲುತ್ತದೆ. ವನಸಿರಿ ಫೌಂಡೇಶನ್ ಕಲ್ಯಾಣ ಕರ್ನಾಟಕದಾದ್ಯಂತ ಹಸಿರುಕರಣಗೊಳಿಸು ಶ್ರಮಿಸುತ್ತಿದೆ. ಯಾವುದೇ ಶುಭ ಸಮಾರಂಭಗಳಲ್ಲಿ ಸಸಿಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ.ನಾವುಗಳು ಕೂಡ ಶುಭ ಸಮಾರಂಭಗಳಲ್ಲಿ ಸಸಿಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಪರಿಸರ ಜಾಗೃತಿ ಮಾಡಿಸಬೇಕು.ವನಸಿರಿ ಫೌಂಡೇಶನ್ ಜೊತೆಗೆ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರಾದ ಶಂಕರಗೌಡ ತುರವಿಹಾಳ,ಚನ್ನಪ್ಪ ಕೆ.ಹೊಸಹಳ್ಳಿ,ಮೌನೇಶ ಬಡಿಗೇರ, ಭಾಷಾವಲಿ, ಮಂಜುನಾಥ,ರವಿಕುಮಾರ, ಚಂದ್ರಶೇಖರ, ವಿರುಪಾಕ್ಷಿ, ಬಸವರಾಜ ಶ್ರೇಷ್ಠಿ,ಮುದುಕಪ್ಪ, ಸಂಪಣ್ಣ,ಧರ್ಮೇಶ,ಮಣಿಕಂಠ ಇನ್ನೂ ಹಲವಾರು ಪರಿಸರ ಪ್ರೇಮಿಗಳು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ