ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಾ ಶಿವರಾತ್ರಿ ಪ್ರಯುಕ್ತ ಇಂದು ಶ್ರೀ ರವಿಶಂಕರ್ ಗುರೂಜಿ ಕೃಪಾ ಆಶೀರ್ವಾದದಿಂದ ಯೋಗ ಶಿಬಿರ

ಯಾದಗಿರಿ : ಶಹಾಪುರದಲ್ಲಿ ಇಂದು ಶಿವರಾತ್ರಿ ಪ್ರಯುಕ್ತವಾಗಿ
ಪರಮಪೂಜ್ಯ ಶ್ರೀ ಶ್ರೀ ರವಿಶಂಕರ್ ಗುರು ಕೃಪಾ ಆಶೀರ್ವಾದದಿಂದ ನಡೆದ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲಾ ವತಿಯಿಂದ 5 ರಿಂದ 18 ವರ್ಷದ ಮಕ್ಕಳಿಗಾಗಿ ಯೋಗ ಶಿಬಿರ ಹಮ್ಮಿ ಕೊಳ್ಳಲಾಗಿತ್ತು.
ಶಿವರಾತ್ರಿ ಪ್ರಯುಕ್ತ ಪ್ರಜ್ಞಾ ಯೋಗ ಶಿಬಿರ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಮಕ್ಕಳು ವಿಶೇಷವಾದ ಪ್ರಜ್ಞೆಯ ಮೂಲಕ ಕಣ್ಣು ಮುಚ್ಚಿ ಓದುವುದು,ಬರೆಯುವುದು, ಚಿತ್ರಗಳನ್ನು ಬಿಡಿಸುವುದು, ಅಂಕಿಗಳನ್ನು ಹೇಳುವುದು,
ಬಣ್ಣಗಳನ್ನು ಗುರುತಿಸುವುದು. ಮತ್ತು ಮಕ್ಕಳ ಮನಸ್ಸಿನಲ್ಲಿ ಬರುವ ಆಲೋಚನೆಗಳನ್ನು ವಿವರಿಸಿವುದು. ಹೀಗೆ ಹಲವಾರು ತರಹದ ಪ್ರಕ್ರಿಯೆ ಯನ್ನು ಮಕ್ಕಳು ತಮ್ಮ ಪೋಷಕರ ಮುಂದೆ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಮಕ್ಕಳು ತಮ್ಮ ಪ್ರತಿಭೆ ಪ್ರಸ್ತುತ ಪಡಿಸಿದರು.
ಮಕ್ಕಳು ಅತಿ ಉತ್ಸಾಹದಿಂದ ಮತ್ತು ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರತಿ ದಿನ ನಮ್ಮ ಮನೆಯಲ್ಲಿ ಪ್ರತಿನಿತ್ಯ ಅಭ್ಯಾಸ ಮಾಡುತ್ತೇವೆಂದು ಪ್ರತಿಜ್ಞೆಯನ್ನು ಮಾಡಿದರು.
ಈ ಕಾರ್ಯಕ್ರಮಕ್ಕೆ ಶಹಾಪುರ ನಗರದ ಜನತೆ ಹಾಗೂ ತಂದೆ ತಾಯಂದಿರು ಮತ್ತು ಗಣ್ಯರು ಕಾರ್ಯಕ್ರಮಕ್ಕೆ ಬಂದು ತಮ್ಮ ತಮ್ಮ ಅನಿಸಿಕೆಗಳನ್ನು ಹೇಳಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಈ ಕಾರ್ಯಕ್ರಮದ ಕೇಂದ್ರ ಬಿಂದು ಆದ ಆರ್ಟ್ ಆಫ್ ಲಿವಿಂಗ್ ಬೆಂಗಳೂರು ಆಶ್ರಮದ ಶಿಕ್ಷಕಿ ಸಾದ್ವಿ ವಾಣಿಶ್ರೀ ರಾವ್ ಯೋಗ ಶಿಬಿರವನ್ನು ನಡೆಸಿ ಕೊಟ್ಟರು.
ಈ ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆಯ ಸಂಯೋಜಕರಾದ ಶ್ರೀ ಎಸ್ ಎಚ್ ರೆಡ್ಡಿ ಜಿ ಮತ್ತು ಶಹಾಪುರ ತಾಲೂಕಿನ ಯೋಗ ಶಿಕ್ಷಕಿಯರು ಗಂಗಾ ತುಂಬಗಿ, ಅನುದಾರ ಮೇಡಂ ಸ್ವಯಂ ಸೇವಕರು ಈ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಪೋಷಕರು ಭಾಗವಹಿಸಿದ್ದರು.

ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ