ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಖಿಲ ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣಾ ವೇದಿಕೆ(ರಿ.) ಸಿರುಗುಪ್ಪ ತಾಲೂಕಿನ ಘಟಕದ ಪದಾಧಿಕಾರಿಗಳ ಉದ್ಘಾಟನಾ ಸಮಾರಂಭ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶ್ರೀ ಅಭಯಾಂಜಿನೇಯ ದೇವಸ್ಥಾನ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನಗೊಂಡಿದ್ದು
ಈ ಕಾರ್ಯಕ್ರಮವನ್ನು ಗಣ್ಯರು..ಅತಿಥಿಗಳು ದೀಪ ಹಚ್ಚುವುದರ ಮೂಲಕ ಚಾಲನೆ ನೀಡಿದರು

ಜಿಲ್ಲಾ ಅಧ್ಯಕ್ಷರಾದಂತಹ ಪ್ರಭು ಸಿದ್ದಮ್ಮನ ಹಳ್ಳಿಯವರು ಮಾತನಾಡಿ
ಈಗಾಗಲೇ ಜಿಲ್ಲಾದ್ಯಾಂತ ಪ್ರಾರಂಭವಾದ ಅಖಿಲ ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣೆ ವೇದಿಕೆ ಸಂಘಟನೆಯನ್ನು ತಾಲೂಕು ಮಟ್ಟದ ಹಂತದಲ್ಲಿ ಆರಂಭಿಸಲಾಯಿತು..

ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಅಧ್ಯಕ್ಷರು
ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ …ಅವರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು.. ಹಾಗೂ ಸರ್ಕಾರದಿಂದ ಬರುವಂತಹ ಸವಲತ್ತುಗಳನ್ನು ಅವರಿಗೆ ಲಭಿಸುವಂತೆ ಮಾಡುವುದೇ ನಮ್ಮ ಸಂಘಟನೆಯ ಮುಖ್ಯ ಉದ್ದೇಶ ಎಂದು ತಿಳಿಸಿದರು

ಸಿರುಗುಪ್ಪ ತಾಲೂಕು ಘಟಕದ ಪದಾಧಿಕಾರಿಗಳಾಗಿ ಖಾಸಿಂ, ವರುಣ್, ಶ್ರೀನಿವಾಸ್, ಆನಂದ,ವಿಶ್ವ ಇನ್ನೂ ಮುಂತಾದವರಿಗೆ ಪದಗ್ರಹಣ ಮಾಡಿ ಸನ್ಮಾನಿಸಲಾಯಿತು.

ಅದೇ ರೀತಿ ಮುಂಬರುವ ಹಂತದಲ್ಲಿ ಸಂಘಟನೆಯ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ವಿ. ತ್ರಿವೇಣಿ.. ಹಾಗೂ ಉಪಾಧ್ಯಕ್ಷರಾಗಿ ಶ್ರೀದೇವಿ ಅವರನ್ನು ನೇಮಿಸಿ ಸನ್ಮಾನ ಮಾಡಲಾಯಿತು..

ಅಖಿಲ ಕರ್ನಾಟಕ ರಾಜ್ಯ ಕಾರ್ಮಿಕರ ಹಿತ ರಕ್ಷಣಾ ವೇದಿಕೆಯ ಸಂಘಟನೆಗೆ ಪ್ರಜಾ ಎಕ್ಸ್ಪ್ರೆಸ್ ದಿನಪತ್ರಿಕೆಯ ವರದಿಗಾರು ಮತ್ತು ಸಿರುಗುಪ್ಪ ತಾಲೂಕ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷರಾದ ಎಂಡಿ ಶೇಕ್ಷಾ ವಲಿ ಇವರನ್ನು ಈ ಸಂಘಟನೆಯ ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಪದಾಧಿಕಾರಿಗಳು, ಜಿಲ್ಲಾ ಪಾದದಿಕರಿಗಳು, ಮುಖ್ಯ ಅತಿಥಿಗಳು ಉಪಸ್ಥಿತರಿದ್ದರು

ವರದಿ ಎಂ ಪವನ್ ಕುಮಾರ್
ಕನ್ನಡ ಕಂದ ಪತ್ರಿಕೆ ವರದಿಗಾರ
ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ