ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೃಢಸಂಕಲ್ಪ ಯಾತ್ರೆಯ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿಯೊಂದು ಹಳ್ಳಿಯ, ಸಮಸ್ಯೆಗಳನ್ನು ಗುರುತಿಸಿಕೊಂಡು ಅವುಗಳ ಪರಿಹಾರಕ್ಕೆ ಪಣತೊಟ್ಟು ಮಾಡುತ್ತಿರುವ ಯಾತ್ರೆ ದೃಢಸಂಕಲ್ಪ ಯಾತ್ರೆಯಾಗಿದೆ. ಈ ಒಂದು ದೃಢ ಸಂಕಲ್ಪ ಯಾತ್ರೆಯು ದಿನಾಂಕ 25 _ 2_ 2023 ರಂದು ಕೊಪ್ಪರಸಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ, ದಶರಥ ಕೊಪ್ಪ, ಗುಡ ಗೂಡಿ, ಕೊಪ್ಪರಸಿಕೊಪ್ಪ ಗ್ರಾಮಗಳಲ್ಲಿ ದೃಢಸಂಕಲ್ಪ ಯಾತ್ರೆಯ ನಿಯಮಿತ ತಾಲೂಕಿನ ಶಾಸಕರಾದ ಸನ್ಮಾನ್ಯ ಶ್ರೀ ಶ್ರೀನಿವಾಸ್ ಮಾನೆ ಯವರು ಪಾದನಡಿಗೆ ಮೂಲಕ ಪ್ರತಿ ಗ್ರಾಮದಲ್ಲಿ ಮನೆ ಮನೆಗೆ ಭೇಟಿಕೊಟ್ಟು ಮುಂದೆ ಬರುವ ವಿಧಾನಸಭಾ ಚುನಾವಣೆಯ ಅಂಗವಾಗಿ ಬೇಟೆಕೊಟ್ಟು ಜನರ ಕಷ್ಟ ಗಳನ್ನು, ತಿಳಿದುಕೊಂಡು ಅವುಗಳ ಪರಿಹಾರೋಪಾಯಕ್ಕಾಗಿ, ದೃಢಸಂಕಲ್ಪ ಮಾಡಿ ಬರುವ ನಡಿಗೆ ದೃಢಸಂಕಲ್ಪ ಯಾತ್ರೆ ಮಹತ್ವವಾಗಿದೆ. ದೃಢಸಂಕಲ್ಪ ಯಾತ್ರೆಯ ಮಾಡುವ ಉದ್ದೇಶದಿಂದ ಇಂದು ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀ ಅಶೋಕ ಜಾದವ ಇವರ ಮನೆಯಲ್ಲಿ ಗ್ರಾಮದ ಪ್ರಮುಖ ಮುಖಂಡರನ್ನು ಸೇರಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರು, ಮತ್ತು ತಾಲೂಕಿನ ಕಾಂಗ್ರೆಸ್ ಯುವ ಮುಖಂಡರಾದ ಶ್ರೀ ಮಂಜುನಾಥ್ ನೀಲಗುಂದ, ಶ್ರೀ ವಿಜಯಕುಮಾರ ದೊಡ್ಮನಿ ಹಾನಗಲ್ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು. ಶ್ರೀ ಪ್ರವೀಣ್ ಹಿರೇಮಠ, ಮತ್ತು ತಾಲೂಕಿನ ಗಣ್ಯ ವ್ಯಕ್ತಿಗಳು ಗ್ರಾಮಕ್ಕೆ ಭೇಟಿಕೊಟ್ಟು ದೃಢ ಸಂಕಲ್ಪ ಯಾತ್ರೆಯ ಮಹತ್ವ ತಿಳಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾರ್ಯಕರ್ತರಲ್ಲಿ ಮನವರಕೆ ಮಾಡಿಕೊಂಡರು. ಈ ಒಂದು ಪೂರ್ವಭಾವಿ ಸಭೆಯಲ್ಲಿ ಗ್ರಾಮದ ಕಾಂಗ್ರೆಸ್ ಯುವ ಮುಖಂಡರು, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಮಹಿಳಾ ಮುಖಂಡರು, ಭಾಗವಹಿಸಿದ್ದರು.

ವರದಿಗಾರರು:ರವಿ ಓಲೆಕಾರ ಹಾನಗಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ