ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಬಲಾದ ಗ್ರಾಮದ “ಬಬಲಾದ ಜಿನುಗು ಕೆರೆಯಲ್ಲಿ ರೈತರಿಂದ ನೀರಿಗಾಗಿ ಹೋರಾಟ”

ವಿಜಯಪುರ:ಬಬಲಾದ ಜಿನುಗು ಕೆರೆಯು ಸಂಪೂರ್ಣವಾಗಿ ಒಣಗಿ ಹೋಗಿದ್ದು ಪಶು, ಪಕ್ಷಿ, ದನ, ಕರುಗಳಿಗೆ, ಕುಡಿಯಲು ಒಂದು ಹನಿ ನೀರು ಸಿಗುತ್ತಿಲ್ಲ ದಿನದಿಂದ ದಿನಕ್ಕೆ ಬೇಸಿಗೆಯ ಬಿಸಿಲು ಹೆಚ್ಚಾಗುತ್ತಾ ಹೊರಟಿದ್ದು ಕುಡಿಯಲು ಸಹ ನೀರು ಸಿಗುತ್ತಿಲ್ಲವೆಂದರೆ ಇಲ್ಲಿ ಬದುಕುವುದು ಹೇಗೆ ನಮಗೆ ಈಗ ಬೆಳೆಗಳಿಗೆ ನೀರು ಬೇಕಾಗಿಲ್ಲ ಆದರೆ ದನಕರುಗಳಿಗೆ ಕುಡಿಯಲು ನೀರು ಸಿಕ್ಕರೆ ಸಾಕು ಎನ್ನುವಂತಾಗಿದೆ ಈಗಾಗಲೇ ಈ ವಿಷಯ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು ಯಾರು ಇತ್ತ ಕಡೆ ಗಮನ ಹರಿಸುತ್ತಿಲ್ಲ, ನೂರಾರು ಜನ ರೈತರು ಕಡು ಬಿಸಿಲಲ್ಲಿ ಧರಣಿ ಕುಳಿತುಕೊಂಡಿದ್ದಾರೆ ಇವರ ಪರಸ್ಥಿತಿ ಕೇಳುವವರು ಯಾರಿದ್ದಾರೆ ಎಂಬ ಯಕ್ಷ ಪ್ರಶ್ನೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಇದರ ಕಡೆ ಗಮನ ಹರಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಯಲಗೊಂಡ ಪೂಜಾರಿ, ಸಿದ್ದರಾಯಗೌಡ ಬಿರಾದಾರ, ಎಸಣಗೌಡ ಬಿರಾದಾರ, ರಾಜುಗೌಡ ಬಿರಾದಾರ, ಅಣ್ಣರಾಯಗೌಡ ಬಿರಾದಾರ, ಮಹಾದೇವ ಅಡಕೆಗೋಳ ರಾಜುಗೌಡ ಪಾಟೀಲ ಇನ್ನು ಅನೇಕರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಯಲಗೊಂಡ ಪೂಜಾರಿಯವರು ಮಾತನಾಡಿದರು.

ವರದಿ:ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ