ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆರೋಗ್ಯ ಇಲಾಖೆಯ ಧರಣಿಯಲ್ಲಿ ವಿಭಿನ್ನ ಘೋಷಣೆ “ಮೇಲೆ ಬಿಳಿ ಬಟ್ಟೆ…ಒಳಗೆ ಖಾಲಿ ಹೊಟ್ಟೆ…!?

ಬೆಂಗಳೂರು:ಕರ್ನಾಟಕ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ರಾಷ್ಟೀಯ ಅರೋಗ್ಯ ಮಿಷನ್ (ಎನ್.ಎಚ್.ಎಂ) ಅಡಿಯಲ್ಲಿ ಒಳಗುತ್ತಿಗೆ ನೌಕರರಾಗಿ ಕರ್ನಾಟಕದ ಎಲ್ಲಾ ಜಿಲ್ಲಾ ಆಸ್ಪತ್ರೆ,ತಾಲ್ಲೂಕು ಆಸ್ಪತ್ರೆ,ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ದಿನಗೂಲಿ ನೌಕರರಿಗಿಂತ ಕಡಿಮೆ ವೇತನಕ್ಕೆ 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು ಇವರ ಸ್ಥಿತಿಯನ್ನು ಯಾವ ಸರ್ಕಾರವಾಗಲೀ ಅಥವಾ ಅಧಿಕಾರಿಗಳಗಲೀ ಕೇಳುವವರಿಲ್ಲ ಈ ಎನ್.ಹೆಚ್.ಎಂ.ಸಿಬ್ಬಂದಿಗಳ ದೈಹಿಕ,ಮಾನಸಿಕ,ಆರ್ಥಿಕ ಪರಿಸ್ಥಿತಿ ಎಲ್ಲಾ ಹದಗೆಟ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ 15-20 ವರ್ಷದಿಂದ ಕಾದು ದಿನಾಂಕ 13-2-2023 ರಂದು ಮುಷ್ಕರಕ್ಕೆ ದುಮುಕಿದ ಇವರಿಗೆ 16 ದಿನವಾದರೂ ಇದುವರೆಗೆ ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಚಿವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಈ ಮುಷ್ಕರದಲ್ಲಿ ಎನ್.ಹೆಚ್. ಎಂ.ಮಹಿಳಾ ಸಿಬ್ಬಂದಿಗಳು ಮತ್ತು ಅವರ ಹಸುಗೂಸುಗಳು ಸಹ ಪಾಲ್ಗೊಂಡಿದ್ದು ಈ ದೃಶ್ಯ ಮನ ಕುಲುಕುವಂತಿದೆ.ಇಷ್ಟಾದರೂ ಕೂಡಾ ಇನ್ನೂ ಕೂಡಾ ಇದಕ್ಕೆ ಸಂಬಂಧಿಸಿದವರು ಮಾತ್ರ ಈ ಕಡೆ ಗಮನಹರಿಸದಿರುವುದು ವಿಷಾದನೀಯ ಸಂಗತಿ.

ಕನಿಷ್ಠ ಮಾನವೀಯತೆಯ ದೃಷ್ಟಿಯಿಂದಲಾದರೂ ಇಲ್ಲಿ ಹೋರಾಟ ನಡೆಸುತ್ತಿರುವವರ ಕಡೆ ಸರ್ಕಾರ ಹಾಗೂ ಇವರಿಂದ ಇಲ್ಲಿಯವರೆಗೆ ಕೆಲಸ ಮಾಡಿಸಿಕೊಂಡ ಅಧಿಕಾರಿಗಳು ಒಮ್ಮೆ ಇವರ ನ್ಯಾಯಯುತ ಬೇಡಿಕೆ ಈಡೇರಿಸುವಂತಾಗಲಿ ಎನ್ನುವುದೇ ನಮ್ಮ ಕರುನಾಡ ಕಂದ ಪತ್ರಿಕೆಯ ಆಶಯ.

-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!