ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಸಮಕಲ್ ಗುಡ್ಡಗಾಡು ಪ್ರದೇಶದಲ್ಲಿ ಸಸಿಗಳು ಸುಟ್ಟು ಭಸ್ಮವಾದ ಸ್ಥಳಕ್ಕೆ ವನಸಿರಿ ಫೌಂಡೇಶನ್ ಅಧ್ಯಕ್ಷ ಭೇಟಿ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ಲ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಬಾಗದಲ್ಲಿರುವ ಗುಡ್ಡಗಾಡು ಪ್ರದೇಶದಲ್ಲಿ ಶನಿವಾರ ಧೂಮಪಾನ ಮಾಡುವ ವ್ಯಕ್ತಿಗಳಿಂದ ಕಾಡ್ಗಿಚ್ಚಾಗಿ ಸುಮಾರು ಸಸಿಗಳು ಸುಟ್ಟು ಹೋಗಿದ್ದನ್ನು ತಿಳಿದ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ಸ್ಥಳಕ್ಕೆ ಭೇಟಿ ನೀಡಿ ಸಸಿಗಳು ಸುಟ್ಟಿರುವದನ್ನು ವೀಕ್ಷಣೆ ಮಾಡಿ ಆತಂಕ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ವನಸಿರಿ ಫೌಂಡೇಶನ್ ಹಲವಾರು ವರ್ಷಗಳಿಂದ ಕಲ್ಯಾಣ ಕರ್ನಾಟಕ ಭಾಗವನ್ನು ಹಸಿರುಕರಣಗೊಳಿಸುವಲ್ಲಿ ಕಾರ್ಯದಲ್ಲಿ ತೊಡಗಿದೆ ಆದರೆ ನಮ್ಮ ಭಾಗದಲ್ಲಿ ಬೇಸಿಗೆ ಹೆಚ್ಚಾಗಿದ್ದರಿಂದ ಕೆಲದಿನಗಳಿಂದ ಎಲ್ಲೆಂದರಲ್ಲಿ ಸಸಿಗಳು ಬೆಂಕಿಗೆ ತಗುಲಿ ಸುಟ್ಟುಹೋಗುತ್ತಿವೆ.ಕೆಲವು ದಿನಗಳ ಹಿಂದೆ ಮಸ್ಕಿ ತಾಲೂಕಿನ ಹೂವಿನಭಾವಿ,ರಾಯಚೂರು ಸಿಂಧನೂರು ರಸ್ತೆ ಹೆದ್ದಾರಿಗಳಲ್ಲಿ ಧೂಮಪಾನ ಮಾಡಿದ ವ್ಯಕ್ತಿಗಳಿಂದ ಸುಟ್ಟುಹೋಗಿವೆ. ಇದೀಗ
ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಉನ್ನತೀಕರಿಸಿದ ಸರಕಾರಿ ಶಾಲೆಯ ಮುಂಭಾಗದಲ್ಲಿರುವ ಗುಡ್ಡಗಾಡು ಪ್ರದೇಶದಲ್ಲಿ ಕೂಡಾ ಶನಿವಾರ ಯಾರೋ ಧೂಮಪಾನ ಮಾಡುವ ವ್ಯಕ್ತಿಗಳು ಧೂಮಪಾನ ಮಾಡಿ ಬೆಂಕಿಕಡ್ಡಿಯನ್ನು ಆರಿಸದೇ ಹಾಗೆ ಎಸೆದಿರುವುದರಿಂದ ಗುಡ್ಡಗಾಡು ಪ್ರದೇಶದಲ್ಲಿ ಸುಮಾರು ಸಸಿಗಳ ಸುಟ್ಟು ಹೋಗಿವೆ ಎಂದು ಕಳವಳ ವ್ಯಕ್ತಪಡಿಸಿ ದಯವಿಟ್ಟು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ತಾವು ಧೂಮಪಾನ ಮಾಡುವಾಗ ಬೆಂಕಿಕಡ್ಡಿ ಆರಿಸಿ ಎಸೆಯಬೇಕು ಮತ್ತು ಆಕಸ್ಮಿಕವಾಗಿ ಸಸಿಗಳಿಗೆ ಎಲ್ಲಿಯಾದರೂ ಬೆಂಕಿ ತಗುಲಿದರೆ ನೀರು ಹಾಕಿ ಆರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಪರಿಸರ ಪ್ರೇಮಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ