ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚೆಂಗಾದರಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

ಹನೂರು ತಾಲೂಕಿನ ರಾಮಾಪುರ ಚಂಗಾದರಹಳ್ಳಿ ಗ್ರಾಮದಲ್ಲಿ ಇಂದು ಅಂದರೆ ದಿನಾಂಕ 20/03/2023 ರಂದು ಜಿಲ್ಲಾ ಅಧಿಕಾರಿಗಳ ನಡೆಹಳ್ಳಿಯಕಡೆ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅಧಿಕಾರಿ ಹಾಗೂ ತಹಸೀಲ್ದಾರ್ ಬರದ ಕಾರಣ ರೈತ ಸಂಘಟನೆ ಯ ಕಾರ್ಯಕರ್ತರು ಸಭೆಯನ್ನು ರದ್ದು ಗೊಳಿಸಿ ಎಂದು ಪಟ್ಟು ಹಿಡಿದರು ನಂತರ ಅವರೇ ಒಂದು ತೀರ್ಮಾನಕ್ಕೆ ಬಂದು ನಾವು ಸಭೆ ರದ್ದು ಗೊಳಿಸಿ ಎಂದು ಹೇಳುವುದು ಬೇಡ ಆದರೆ ನಾವೇ ಸಭೆ ಬಿಟ್ಟು ಹೊರಡೋಣ ಎಂದು ರೈತ ಸಂಘದ ಕಾರ್ಯಕರ್ತರೂ ಹೊರಟು ಹೋದರು.ಆಗ ಸಭೆಯು ಕಾಲಿ ಕುರ್ಚಿಗಳಿಂದ ರಾರಾಜಿಸಿತ್ತು ಹಾಗೂ ರೈತ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳು ಹಾಗೂ ತಹಸಿಲ್ದಾರ್ ಗೆ ಧಿಕ್ಕಾರಗಳನ್ನು ಕೂಗುತ್ತಾ ಅಲ್ಲಿಂದ ಹೊರಟರು .. ನಂತರ ಗ್ರೇಡ್ 2 ತಹಸೀಲ್ದಾರ್ ಧನಂಜಯ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಯ ಕಡೆ ಕಾರ್ಯಕ್ರಮ ಮಾಡುವುದು ಗ್ರಾಮಗಳಲ್ಲಿರುವಂತಹ ಸಮಸ್ಯೆಗಳನ್ನು ಪರಿಶೀಲಿಸಿ ಅರ್ಜಿಗಳನ್ನು ಸ್ವೀಕರಿಸಲು ಮತ್ತು ಮುಂದಿನ ದಿನಗಳಲ್ಲಿ ಅದನ್ನು ಬಗೆಹರಿಸಲು ಇಂತಹ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದರು.
ನಂತರ ಬಂದಂಥ ಕೆಲವು ಅರ್ಜಿಗಳನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ವರ್ಗದವರು ಗ್ರಾಮ ಲೆಕ್ಕಾಧಿಕಾರಿಗಳು ರೈತಾಪಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು..

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ