ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಮರ ಶ್ರೀ ಆಲದ ಮರಕ್ಕೆ ಬಳಗಾನೂರ ಶ್ರೀ.ಮ.ನಿ.ಪ್ರ ಸಿದ್ದಬಸವ ಮಹಾಸ್ವಾಮಿಗಳು ಭೇಟಿ

ರಾಯಚೂರು:ಸಿಂಧನೂರಿನ ಅಮರ ಶ್ರೀ ಆಲದ ಮರಕ್ಕೆ ಇಂದು ಮಸ್ಕಿ ತಾಲೂಕಿನ ಸುಕ್ಷೇತ್ರ ಬಳಗಾನೂರ ಶ್ರೀ ಮ.ನಿ.ಪ್ರ. ಸಿದ್ಧಬಸವ ಮಹಾಸ್ವಾಮಿಗಳು ಭೇಟಿ ನೀಡಿ ವೀಕ್ಷಣೆ ಮಾಡಿದರು.

ನಂತರ ಮಾತನಾಡಿದ ಸುಕ್ಷೆತ್ರ ಬಳಗಾನೂರ ಶ್ರೀ ಮ.ನಿ.ಪ್ರ. ಸಿದ್ದಬಸವ ಮಹಾಸ್ವಾಮಿಗಳು ಪ್ರಕೃತಿಯ ಮಡಿಲಲ್ಲಿ ಜನಿಸಿರುವ ಪ್ರತಿಯೊಬ್ಬರೂ ವೃಕ್ಷಮಾತೆ ಆರಾಧನೆಯಲ್ಲಿ ತೊಡಗಬೇಕು ಇಂತಹ ವೃಕ್ಷಮಾತೆಯ ಆರಾಧನೆಯಲ್ಲಿ ಪ್ರತಿನಿತ್ಯ ತೊಡಗಿರುವ ಅಮರೇಗೌಡ ಮಲ್ಲಾಪೂರ ಅವರ ಕಾರ್ಯ ಶ್ಲಾಘನೀಯ. ಒಂದು ಕಡಿದು ಹಾಕಿದ ಆಲದ ಮರವನ್ನು ತಂದು ಮರುಜನ್ಮ ನೀಡಿ ಅದಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಇನ್ನಿತರ ಪೂಜ್ಯರ ಆರ್ಶೀವಾದದಿಂದ ಅಮರ ಶ್ರೀ ಎಂದು ನಾಮಕರಣ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂದು ವಿವಿಧ ರಾಜ್ಯಗಳಿಂದ ಪರಿಸರ ಪ್ರೇಮಿಗಳು ಆಗಮಿಸಿ ವೀಕ್ಷಣೆ ಮಾಡುತ್ತಿರುವುದು ತುಂಬಾ ಸಂತೋಷದ ಸಂಗತಿ.ಇಂತಹ ಪ್ರಕೃತಿಯ ಆರಾಧನೆಯಲ್ಲಿ ತೊಡಗಿರುವ ವನಸಿರಿ ತಂಡಕ್ಕೆ ಶುಭವಾಗಲಿ ಎಂದು ಆರೈಸಿದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರು ಅಮರೇಗೌಡ ಮಲ್ಲಾಪೂರ,ಚಿಕಲಪರ್ವಿ ಗಿರಿರಾಜ ಪೂಜಾರಿ,ರಂಜಾನ್ ಸಾಬ್,ಗಿರಿಸ್ವಾಮಿ ಹಡಗಿನಾಳ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ಚನ್ನಪ್ಪ ಕೆ.ಹೊಸಹಳ್ಳಿ ಇನ್ನಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ