ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಂದಿನಿಂದ 5 ಮತ್ತು 8ನೇ ತರಗತಿಗಳಿಗೆ ರಾಜ್ಯ ಮಟ್ಟದ ಮೌಲ್ಯಾಂಕನ ಪರೀಕ್ಷೆ


ಸಿಂಧನೂರು.ಮಾ.26
ನಾಳೆಯಿಂದ ಅಂದರೆ ಮಾರ್ಚ್-27ರಿಂದ 5 ಮತ್ತು 8ನೇ ತರಗತಿಗಳಿಗೆ ರಾಜ್ಯ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳು ನಡೆಯಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ವಟಗಲ್ ತಿಳಿಸಿದ್ದಾರೆ.
ಅವರು ಈ ಕುರಿತು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಜ್ಯ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳು ನಡೆಯುತ್ತಿವೆ. ದಿನಾಂಕ: 27-03-2023 ಸೋಮವಾರದಿಂದ ದಿನಾಂಕ: 01-04-2023 ಶನಿವಾರದವರೆಗೆ ಪರೀಕ್ಷೆಗಳು ಮಧ್ಯಾಹ್ನ 2.30ರಿಂದ 4.30ರವರೆಗೆ ಮತ್ತು ಗುರುವಾರದಂದು ಮಾತ್ರ ಬೆಳಿಗ್ಗೆ: 10.30ರಿಂದ 12.30ರವರೆಗೆ ನಡೆಯುತ್ತವೆ.
ವಿಶೇಷತೆಗಳು : 5 ಮತ್ತು 8ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ, ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು.
ಈ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಇದು ಕೇವಲ ಮೌಲ್ಯಾಂಕನವಾಗಿರುತ್ತದೆ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿಗಳನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಕ್ಕೆ ಇದೊಂದು ದಿಕ್ಸೂಚಿಯಾಗಲಿದೆ. ಈ ಅಂಶಗಳನ್ನು ವಿದ್ಯಾರ್ಥಿಗಳು, ಪಾಲಕರ-ಪೋಷಕರು ಅರಿತುಕೊಳ್ಳಬೇಕು. ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. ಪಠ್ಯಪುಸ್ತಕಗಳನ್ನು ಆಧರಿಸಿದ ಕಲಿಕಾಂಶಗಳಿಗೆ ಮಾತ್ರ ಮೌಲ್ಯಾಂಕನಕ್ಕೆ ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಬಿ.ಆರ್.ಸಿ ಕೇಂದ್ರದ ಸಮನ್ವಯಾಧಿಕಾರಿ ಬಸಲಿಂಗಪ್ಪ ಮತ್ತು ಮೌಲ್ಯಾಂಕನ ಕಾರ್ಯಕ್ರಮದ ನೋಡಲ್ ಅಧಿಕಾರಿ ರವಿ ಪವಾರ್ ತಿಳಿಸಿದ್ದಾರೆ.

-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!